ಆ್ಯಪ್ನಗರ

ಕುರುಡಗಿ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ

ಗದಗ: ಜಿಲ್ಲಾವಾಣಿಜ್ಯೋದ್ಯಮ ಸಂಸ್ಥೆಯ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಶರಣಬಸಪ್ಪ ಕುರಡಗಿ ಅವರು ಅವಿರೋಧವಾಗಿ ಆಯ್ಕೆಯಾದರು. ಶುಕ್ರವಾರ ನಿರ್ಗಮಿತ ಅಧ್ಯಕ್ಷ ಮಲ್ಲಿಕಾರ್ಜುನ ಸುಕೋಡ ಅಧ್ಯಕ್ಷತೆಯಲ್ಲಿನಡೆದ ಸಭೆಯಲ್ಲಿಶರಣಬಸಪ್ಪ ಕುರಡಗಿ ಸೇರಿದಂತೆ ಇನ್ನುಳಿದ ಪದಾಧಿಕಾರಿಗಳನ್ನು

Vijaya Karnataka 13 Oct 2019, 5:00 am
ಗದಗ: ಜಿಲ್ಲಾವಾಣಿಜ್ಯೋದ್ಯಮ ಸಂಸ್ಥೆಯ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಶರಣಬಸಪ್ಪ ಕುರಡಗಿ ಅವರು ಅವಿರೋಧವಾಗಿ ಆಯ್ಕೆಯಾದರು.
Vijaya Karnataka Web president of the blind entrepreneurial agency
ಕುರುಡಗಿ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ

ಶುಕ್ರವಾರ ನಿರ್ಗಮಿತ ಅಧ್ಯಕ್ಷ ಮಲ್ಲಿಕಾರ್ಜುನ ಸುಕೋಡ ಅಧ್ಯಕ್ಷತೆಯಲ್ಲಿನಡೆದ ಸಭೆಯಲ್ಲಿಶರಣಬಸಪ್ಪ ಕುರಡಗಿ ಸೇರಿದಂತೆ ಇನ್ನುಳಿದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಮಾಲಾರ್ಪಣೆ ಮಾಡಿ ಅಧಿಕಾರ ಹಸ್ತಾಂತರಿಸಲಾಯಿತು.

ಉಪಾಧ್ಯಕ್ಷರಾಗಿ ರಾಮನಗೌಡ ದಾನಪ್ಪಗೌಡ್ರ, ಅರವಿಂದ ಪಟೇಲ, ಜಯದೇವ ಮೆಣಸಗಿ, ಗೌರವ ಕಾರ್ಯದರ್ಶಿಗಳಾಗಿ ತಾತನಗೌಡ ಪಾಟೀಲ, ಸಹ ಗೌರವ ಕಾರ್ಯದರ್ಶಿಯಾಗಿ ಈಶ್ವರಪ್ಪ ಮುನವಳ್ಳಿ, ನಾಗೇಶ ತಿರಕಪ್ಪ ಹುಬ್ಬಳ್ಳಿ, ಕೋಶಾಧ್ಯಕ್ಷರಾಗಿ ಸೋಮನಾಥ ಜಾಲಿ ಅವಿರೋಧವಾಗಿ ಆಯ್ಕೆಯಾದರು.

ಪದಾಧಿಕಾರಿಗಳ ಆಯ್ಕೆಯನ್ನು ಸಂಸ್ಥೆ ಮಾಜಿ ಅಧ್ಯಕ್ಷ ಎಸ್‌.ವಿ. ಇಟಗಿ ಘೋಷಿಸಿದರು. ಮಧುಸೂದನ ಪುಣೇಕರ ಸ್ವಾಗತಿಸಿದರು. ರಾಮನಗೌಡ ದಾನಪ್ಪಗೌಡ್ವ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ