ಆ್ಯಪ್ನಗರ

ಪ್ರಧಾನಿ ಮೋದಿ ನಿರ್ಣಯ ಸ್ವಾಗತಾರ್ಹ

ಗದಗ : ಪ್ರಧಾನಿ ನರೇಂದ್ರ ಮೋದಿ ಅವರ ಜಾಗತಿಕ ಆರ್ಥಿಕ ಅಭಿವೃದ್ಧಿ ಮತ್ತು ಶಾಂತಿ ಸಾಧನೆಗೆ ದಕ್ಷಿಣ ಕೋರಿಯಾ ಸಿಯೋಲ್‌ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯ 2 ಕೋಟಿ ರೂ. ಮೊತ್ತವನ್ನು ಪ್ರಧಾನಿ ಮೋದಿ ನಮಾಮಿ ಗಂಗೆ ಯೋಜನೆಗೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಹೇಳಿದರು.

Vijaya Karnataka 25 Feb 2019, 5:00 am
ಗದಗ : ಪ್ರಧಾನಿ ನರೇಂದ್ರ ಮೋದಿ ಅವರ ಜಾಗತಿಕ ಆರ್ಥಿಕ ಅಭಿವೃದ್ಧಿ ಮತ್ತು ಶಾಂತಿ ಸಾಧನೆಗೆ ದಕ್ಷಿಣ ಕೋರಿಯಾ ಸಿಯೋಲ್‌ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯ 2 ಕೋಟಿ ರೂ. ಮೊತ್ತವನ್ನು ಪ್ರಧಾನಿ ಮೋದಿ ನಮಾಮಿ ಗಂಗೆ ಯೋಜನೆಗೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಹೇಳಿದರು.
Vijaya Karnataka Web prime minister modis decision is welcome
ಪ್ರಧಾನಿ ಮೋದಿ ನಿರ್ಣಯ ಸ್ವಾಗತಾರ್ಹ


ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಸಿಯೋಲ್‌ ಪ್ರಶಸ್ತಿ ಲಭಿಸಿದೆ. ನರೇಂದ್ರ ಮೋದಿ ಈ ಪ್ರಶಸ್ತಿ ಪಡೆದ 14ನೇ ವ್ಯಕ್ತಿ ಎನ್ನುವ ಕೀರ್ತಿಗೂ ಪಾತ್ರರಾಗಿದ್ದಾರೆ. ಪ್ರಶಸ್ತಿ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯವನ್ನು ಮೆಚ್ಚಿರುವ ದೇಶದ ಜನ ಮತ್ತೊಮ್ಮೆ ಮೋದಿ ಪ್ರಧಾನಿ ಆಗಲಿ ಎನ್ನುವ ಸಂಕಲ್ಪ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ಪರವಾಗಿದೆ. ಬಿಜೆಪಿಗೆ ಬೆಂಬಲಿಸುವ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ