ಆ್ಯಪ್ನಗರ

ಕೈಗಾರಿಕೆ ಸ್ಥಾಪನೆಗೆ ಆದ್ಯತೆ ನೀಡಿ

ಗದಗ: ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಜೊತೆಗೆ ಕೈಗಾರಿಕೆ ಸ್ಥಾಪನೆಗೆ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಒತ್ತಾಯಿಸಿದ್ದಾರೆ.

Vijaya Karnataka 21 Jun 2019, 5:00 am
ಗದಗ: ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಜೊತೆಗೆ ಕೈಗಾರಿಕೆ ಸ್ಥಾಪನೆಗೆ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಒತ್ತಾಯಿಸಿದ್ದಾರೆ.
Vijaya Karnataka Web prioritize the establishment of industries
ಕೈಗಾರಿಕೆ ಸ್ಥಾಪನೆಗೆ ಆದ್ಯತೆ ನೀಡಿ


ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರಕಾರ ತನ್ನ ಆ್ಯಪ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮುಂಗಡಪತ್ರ ರಚನೆಗೆ ಕೇಳಲಾದ ಅಭಿಪ್ರಾಯಕ್ಕೆ ಅನಿಲ ಮೆಣಸಿನಕಾಯಿ ಈ ರೀತಿ ಸಲಹೆ ನೀಡಿದ್ದಾರೆ.

ಗದಗ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲೂ ಐತಿಹಾಸಿಕ ಸಾಧನೆ ಮಾಡಿದೆ. ಅನೇಕ ಪ್ರತಿಭಾವಂತರು ರಾಷ್ಟ್ರ,ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಶೈಕ್ಷ ಣಿಕ, ಸಂಗೀತ, ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ, ಸಹಕಾರ, ಆಧ್ಯಾತ್ಮ, ನೇಕಾರಿಕೆ, ಜವಳಿ, ಕ್ರೀಡೆ ಸೇರಿದ ಸಾರ್ವಜನಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದೆ. ಇನ್ನೂ ಹೆಚ್ಚಿನ ಬೆಳವಣಿಗೆಗಾಗಿಯೇ ಗದಗ ನಗರದಲ್ಲಿ ಕ್ರೀಡಾ ಸಮುಚ್ಛಯ, ಟೆಕ್ಸ್‌ಟೈಲ್‌ ಪಾರ್ಕ ಸೇರಿದಂತೆ ಆಧುನಿಕ ಮಾದರಿಯ ಯೋಜನೆಗಳ ಅವಶ್ಯಕತೆ ಇದೆ. ಮೂರನೇ ಬಾರಿಗೆ ಗೆಲುವು ಸಾಧಿಸಿದ ಸಂಸದ ಶಿವಕುಮಾರ ಉದಾಸಿ ಅವರು ಜನರ ಕನಸು ಸಾಕಾರಗೊಳಿಸಲು ಪ್ರಯತ್ನಿಸಬೇಕು ಎಂದು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ