ಆ್ಯಪ್ನಗರ

ಶೈಕ್ಷ ಣಿಕ ಮೂಲ ಸೌಲಭ್ಯಕ್ಕೆ ಆದ್ಯತೆ : ಶಾಸಕ ಲಮಾಣಿ

ಮುಂಡರಗಿ: ಶೈಕ್ಷ ಣಿಕವಾಗಿ ಮೂಲಭೂತ ಸೌಲಭ್ಯಗಳಾದ ಕೊಠಡಿಗಳ ನಿರ್ಮಾಣ ಇತರ ಸೌಲಭ್ಯಕ್ಕಾಗಿ ಪ್ರಥಮ ಆದ್ಯತೆ ನೀಡಿ ಮಕ್ಕಳ ಶ್ರೇಯೋಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

Vijaya Karnataka 5 Mar 2019, 5:00 am
ಮುಂಡರಗಿ: ಶೈಕ್ಷ ಣಿಕವಾಗಿ ಮೂಲಭೂತ ಸೌಲಭ್ಯಗಳಾದ ಕೊಠಡಿಗಳ ನಿರ್ಮಾಣ ಇತರ ಸೌಲಭ್ಯಕ್ಕಾಗಿ ಪ್ರಥಮ ಆದ್ಯತೆ ನೀಡಿ ಮಕ್ಕಳ ಶ್ರೇಯೋಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
Vijaya Karnataka Web GDG-4MDR1 KOTE SC


ಇಲ್ಲಿಯ ಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8.70 ಲಕ್ಷ ರೂ. ವೆಚ್ಚದ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷ ಣಿಕ ಪ್ರಗತಿಗೆ ಕಾಳಜಿ ವಹಿಸಬೇಕು. ಅಧಿಕಾರಿಗಳು, ಶಿಕ್ಷ ಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಾರೆ ಎಂದರು.

ಹಮ್ಮಿಗಿ ಜಿಪಂ ಸದಸ್ಯೆ ಶೋಭಾ ಮೇಟಿ ಮಾತನಾಡಿ, ಶಾಲೆ ಮತ್ತು ಮಕ್ಕಳಿಗೆ ಮೂಲ ಸೌಲಭ್ಯ ಒದಗಿಸಲು ಸಂತೋಷವಾಗುತ್ತದೆ. ಗುಣಾತ್ಮಕ ಶಿಕ್ಷ ಣ ನೀಡುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುವದರ ಜತೆಗೆ ಶಾಲೆ ಶಿಕ್ಷ ಕರು ಶ್ರಮಪಟ್ಟಿರುವದಕ್ಕೂ ಸಾರ್ಥಕವಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷ ಣಾಧಿಕಾರಿ ಶಂಕರ ಹಳ್ಳಿಗುಡಿ ಮಾತನಾಡಿ, ತಾಲೂಕಿನಲ್ಲಿ ಅವಶ್ಯಕತೆ ಇರುವ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣವಾಗುತ್ತಿವೆ, ಈಗಾಗಲೇ ಬಾಗೇವಾಡಿ, ಕಲಕೇರಿ ಗ್ರಾಮಗಳಲ್ಲಿಯೂ ನೂತನ ಕೊಠಡಿ ನಿರ್ಮಿಸಲಾಗಿದೆ, ಶಿಕ್ಷ ಣ ಗುಣಮಟ್ಟ ಕಾಯಲು ಶಿಕ್ಷ ಕರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ, ಹಾಗೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸಲು ಬಿಆರ್‌ಸಿ, ವರ್ಗದವರು ವಿದ್ಯಾರ್ಥಿಗಳ ಮನೆ, ಮನೆಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲಲ್ಲಿ ಬಿಸಿಯೂಟ ಕಾರ್ಯಕ್ರಮದಲ್ಲಿದ್ದ ನ್ಯೂನತೆ ಸರಿಪಡಿಸಲಾಗಿದೆ ಎಂದರು.

ಜಿಪಂ ಸದಸ್ಯ ಈರಣ್ಣ ನಾಡಗೌಡ್ರ ಮಾತನಾಡಿದರು. ಪುರಸಭೆ ಅಧ್ಯಕ್ಷ ಬಸವರಾಜ ನರೇಗಲ್‌, ಮುಖಂಡರಾದ ಕರಬಸಪ್ಪ ಹಂಚಿನಾಳ, ಜಿಪಂ ಮಾಜಿ ಸದಸ್ಯ ಹೇಮಗಿರೀಶ ಹಾವಿನಾಳ, ಡಾ.ಬಿ.ಎಸ್‌.ಮೇಟಿ, ದೇವಪ್ಪ ಕಂಬಳಿ, ರಮೇಶ ಹುಳಕಣ್ಣವರ, ಪ್ರಗು ಎಸ್‌.ಎಫ್‌.ಹಡಪದ, ನಿರ್ಮಿತಿ ಕೇಂದ್ರದ ಎಸ್‌.ಎಸ್‌.ನೀಲಗುಂದ, ಎಸ್‌.ಡಿ.ಬಸೇಗೌಡ್ರ, ಕೊಟ್ರೇಶ ಸಿಂದೋಗಿ, ಅಂದಪ್ಪ ಉಳ್ಳಾಗಡ್ಡಿ, ಇಮ್ರಾಪೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ವಿಶ್ವನಾಥ ಉಳ್ಳಾಗಡ್ಡಿ ನಿರೂಪಿಸಿದರು.

ಬಾಗೇವಾಡಿ, ಕಲಕೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ರಾಮಣ್ಣ ಲಮಾಣಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್‌.ಎಸ್‌.ಪಾಟೀಲ, ಪಿ.ಎಂ.ಪಾಟೀಲ, ಕೆ.ವಿ.ಹಂಚಿನಾಳ, ಹೇಮಗಿರೀಶ ಹಾವಿನಾಳ, ಅಂದಪ್ಪ ಮೇಟಿ, ಬಿಇಒ ಎಸ್‌.ಎನ್‌.ಹಳ್ಳಿಗುಡಿ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ