ಆ್ಯಪ್ನಗರ

ತಂಬಾಕಿನ ದುಷ್ಪರಿಣಾಮ ಅರಿವು ಮೂಡಿಸಿ

ಗದಗ : ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷ ಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌, ಹೃದಯ, ಶ್ವಾಸ ಸಂಬಂಧಿ ಮಾರಣಾಂತಿಕ ರೋಗ ಬರುತ್ತವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ ಎಸ್‌.ಜಿ. ಸಲಗರೆ ಹೇಳಿದರು.

Vijaya Karnataka 20 Jul 2019, 5:00 am
ಗದಗ : ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷ ಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌, ಹೃದಯ, ಶ್ವಾಸ ಸಂಬಂಧಿ ಮಾರಣಾಂತಿಕ ರೋಗ ಬರುತ್ತವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ ಎಸ್‌.ಜಿ. ಸಲಗರೆ ಹೇಳಿದರು.
Vijaya Karnataka Web raise awareness of the ill effects of tobacco
ತಂಬಾಕಿನ ದುಷ್ಪರಿಣಾಮ ಅರಿವು ಮೂಡಿಸಿ


ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಜಿಲ್ಲಾ ಸಮೀಕ್ಷ ಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ‍್ಯಕ್ರಮದಡಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಅಧಿನಿಯಮ ಕೋಟ್ಪಾ 2003 ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಕಾರಾರ‍ಯಗಾರ ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿ ತಂಬಾಕು ಸೇವನೆಯಿಂದ 10 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವಕರು ತಂಬಾಕು ಸೇವನೆಯ ದುಶ್ಚಟಕ್ಕೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಬಹಳ ಮುಖ್ಯ. ಈ ಅನಿಷ್ಟ ಪದ್ಧತಿ ಹೋಗಲಾಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಎಸ್‌.ಜಿ. ಸಲಗರೆ ತಿಳಿಸಿದರು.

ಪತ್ರಕರ್ತ ಮಂಜುನಾಥ ಬೊಮ್ಮನಕಟ್ಟಿ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನದಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಶಾಲಾ ಆವರಣದಿಂದ 100 ಮೀ.ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವ ವ್ಯವಸ್ಥೆ ಕಂಡುಬಂದರೆ ಮಕ್ಕಳ ಸಹಾಯವಾಣಿ ಕರೆ ಮಾಡಿ ಮಾಹಿತಿ ಒದಗಿಸಬಹುದು. ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕುರಿತು ತಾಲೂಕು ಮಟ್ಟದಲ್ಲಿಯೂ ತರಬೇತಿ ಕಾರ‍್ಯ ಏರ್ಪಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರುಪಾಕ್ಷ ರೆಡ್ಡಿ ಮಾದಿನೂರ ಮಾತನಾಡಿದರು. ಜಿಲ್ಲಾ ಸಮೀಕ್ಷಾಧಿಕಾರಿಗಳು ಹಾಗೂ ಎನ್‌ಟಿಸಿಪಿ ಕಾರ‍್ಯಕ್ರಮಾಧಿಕಾರಿ ಡಾ. ಸತೀಶ ಬಸರಿಗಿಡದ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಅರವಿಂದ ಕರಿನಾಗಣ್ಣವರ ಉಪನ್ಯಾಸ ನೀಡಿದರು. ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ ಮೇಲ್ವಿಚಾರಕ ಬಸವರಾಜ ಲಾಳಗಟ್ಟಿ ನಿರೂಪಿಸಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ