ಗದಗ: ಹೆಣ್ಣು ಮಕ್ಕಳÜ ಮತ್ತು ಮಕ್ಕಳÜ ರಕ್ಷಣೆ ಹಾಗೂ ಪೋಷಣೆಗಾಗಿ ಪೋಕ್ಸೊ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಜಾರಿಗೆ ಬಂದಿದ್ದು, ಈ ಬಗ್ಗೆ ಜನರಲ್ಲಿಅರಿವು ಮೂಡಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ಹೇಳಿದರು.
ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಸವೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜ್ ಆಶ್ರಯದಲ್ಲಿಬಸವೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪೋಕ್ಸೋ ಮತ್ತು ಬಾಲ ನ್ಯಾಯ ಕಾಯ್ದೆಯ ಕಾನೂನು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ರೂಪಾ ನಾಯ್ಕ ಮಾತನಾಡಿ, ಸುಸ್ಥಿರ ಸಮಾಜ ನಿರ್ಮಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಕೇವಲ ಹಕ್ಕು ಮತ್ತು ಕರ್ತವ್ಯ ತಿಳಿದುಕೊಂಡರೆ ಸಾಲದು, ಅದರಂತೆ ನಡೆದಾಗ ಮಾತ್ರ ನಾವು ಸಮಾಜದಲ್ಲಿಒಳ್ಳೆಯ ವ್ಯಕ್ತ್ತಿಗಳಾಗಿ ಬಾಳಿ ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಹಿರಿಯ ನ್ಯಾಯವಾದಿ ಎಸ್. ಕೆ. ಪಾಟೀಲ ಮಾತನಾಡಿ, ಮಕ್ಕಳ ಮೇಲೆ ದೌರ್ಜನ್ಯ ನಡೆಯುವುದನ್ನು ತಪ್ಪಿಸಲು ಕಠಿಣ ಶಿಕ್ಷೆ ಒಳಗೊಂಡ ಪೋಕ್ಸೊ ಕಾಯ್ದೆ ಬಗ್ಗೆ ತಾವೆಲ್ಲರೂ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು. ಪೊಲೀಸ್ ಇಲಾಖೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿಶೇಷ ಆ್ಯಪ್ ತಯಾರಿಸಿದ್ದು ಸ್ಮಾರ್ಟ್ ಫೋನಿನಲ್ಲಿ ಅದನ್ನು ಅಳವಡಿಸಿಕೊಂಡು ಇತರರಿಗೆ ಜಾಗೃತಿ ಮೂಡಿಸಿ ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೆ.ಎಂ. ನಾಯ್ಕರ್, ಜಿಲ್ಲಾವಕೀಲರ ಸಂಘ¨ ಅಧ್ಯಕ್ಷ ವಿ.ಬಿ. ಹುಬ್ಬಳ್ಳಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಪಿ.ಜಿ. ಚಲುವಮೂರ್ತಿ, ಜಿಲ್ಲಾಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಹಿರಿಯ ವಕೀಲ ಎಸ್. ಸಿ. ಹೊಸಮನಿ, ಜಿಲ್ಲಾವಕೀಲರ ಸಂಘದ ಜಂಟಿ ಕಾರ್ಯದರ್ಶಿ ವೈ.ಡಿ. ತಳವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ಎಚ್.ಎಚ್. ಕುಕನೂರ, ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ ಭಾಗವಹಿಸಿದ್ದರು. ಶಿವರಾಜ ಪ್ರಾರ್ಥಿಸಿದರು, ಪ್ರಾ. ಡಿ.ಬಿ. ಪಾಟೀಲ ವಂದಿಸಿದರು. ಪುಟ್ಟರಾಣಿ ಶಿರೋಳ ನಿರೂಪಿಸಿದರು.
ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಸವೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜ್ ಆಶ್ರಯದಲ್ಲಿಬಸವೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪೋಕ್ಸೋ ಮತ್ತು ಬಾಲ ನ್ಯಾಯ ಕಾಯ್ದೆಯ ಕಾನೂನು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ರೂಪಾ ನಾಯ್ಕ ಮಾತನಾಡಿ, ಸುಸ್ಥಿರ ಸಮಾಜ ನಿರ್ಮಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಕೇವಲ ಹಕ್ಕು ಮತ್ತು ಕರ್ತವ್ಯ ತಿಳಿದುಕೊಂಡರೆ ಸಾಲದು, ಅದರಂತೆ ನಡೆದಾಗ ಮಾತ್ರ ನಾವು ಸಮಾಜದಲ್ಲಿಒಳ್ಳೆಯ ವ್ಯಕ್ತ್ತಿಗಳಾಗಿ ಬಾಳಿ ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಹಿರಿಯ ನ್ಯಾಯವಾದಿ ಎಸ್. ಕೆ. ಪಾಟೀಲ ಮಾತನಾಡಿ, ಮಕ್ಕಳ ಮೇಲೆ ದೌರ್ಜನ್ಯ ನಡೆಯುವುದನ್ನು ತಪ್ಪಿಸಲು ಕಠಿಣ ಶಿಕ್ಷೆ ಒಳಗೊಂಡ ಪೋಕ್ಸೊ ಕಾಯ್ದೆ ಬಗ್ಗೆ ತಾವೆಲ್ಲರೂ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು. ಪೊಲೀಸ್ ಇಲಾಖೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿಶೇಷ ಆ್ಯಪ್ ತಯಾರಿಸಿದ್ದು ಸ್ಮಾರ್ಟ್ ಫೋನಿನಲ್ಲಿ ಅದನ್ನು ಅಳವಡಿಸಿಕೊಂಡು ಇತರರಿಗೆ ಜಾಗೃತಿ ಮೂಡಿಸಿ ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೆ.ಎಂ. ನಾಯ್ಕರ್, ಜಿಲ್ಲಾವಕೀಲರ ಸಂಘ¨ ಅಧ್ಯಕ್ಷ ವಿ.ಬಿ. ಹುಬ್ಬಳ್ಳಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಪಿ.ಜಿ. ಚಲುವಮೂರ್ತಿ, ಜಿಲ್ಲಾಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಹಿರಿಯ ವಕೀಲ ಎಸ್. ಸಿ. ಹೊಸಮನಿ, ಜಿಲ್ಲಾವಕೀಲರ ಸಂಘದ ಜಂಟಿ ಕಾರ್ಯದರ್ಶಿ ವೈ.ಡಿ. ತಳವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ಎಚ್.ಎಚ್. ಕುಕನೂರ, ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ ಭಾಗವಹಿಸಿದ್ದರು. ಶಿವರಾಜ ಪ್ರಾರ್ಥಿಸಿದರು, ಪ್ರಾ. ಡಿ.ಬಿ. ಪಾಟೀಲ ವಂದಿಸಿದರು. ಪುಟ್ಟರಾಣಿ ಶಿರೋಳ ನಿರೂಪಿಸಿದರು.