ಆ್ಯಪ್ನಗರ

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ನರಗುಂದ : ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ಸೃಜನಶೀಲ ಚಟುವಟಿಕೆಗಳನ್ನು ಬೆಳೆಸಲು ಶಿಕ್ಷ ಕರು ನಿರಂತರ ಪ್ರಯತ್ನಿಸಬೇಕು ಎಂದು ಲಯನ್ಸ ಸಂಸ್ಥೆ ಕಾರ್ಯದರ್ಶಿ ಜಿ.ಟಿ.ಗುಡಿಸಾಗರ ಹೇಳಿದರು.

Vijaya Karnataka 14 Jul 2019, 5:00 am
ನರಗುಂದ : ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ಸೃಜನಶೀಲ ಚಟುವಟಿಕೆಗಳನ್ನು ಬೆಳೆಸಲು ಶಿಕ್ಷ ಕರು ನಿರಂತರ ಪ್ರಯತ್ನಿಸಬೇಕು ಎಂದು ಲಯನ್ಸ ಸಂಸ್ಥೆ ಕಾರ್ಯದರ್ಶಿ ಜಿ.ಟಿ.ಗುಡಿಸಾಗರ ಹೇಳಿದರು.
Vijaya Karnataka Web GDG-13NRD4


ನಗರದ ಲಯನ್ಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿಜ್ಞಾನ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸುವ ಕೆಲಸ ನಡೆಯಬೇಕು. ಪ್ರತಿಯೊಬ್ಬರು ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದರು.

ಆಧುನಿಕ ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ಮಕ್ಕಳನ್ನು ಸಿದ್ಧಪಡಿಸಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸಬೇಕು ಎಂದರು. ಅತಿಥಿ ನಿರ್ದೇಶಕ ಜಿ.ಬಿ.ಕುಲಕರ್ಣಿ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಲು ಮುಂದಾಗುವ ಮೂಲಕ ಶಿಕ್ಷ ಕರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಮುಖ್ಯ ಶಿಕ್ಷ ಕ ಜಿ.ಬಿ.ಹಿರೇಮಠ ಹಾಗೂ ಸಾಂಸ್ಕೃತಿಕ, ವಿಜ್ಞಾನ ಹಾಗೂ ಕ್ರೀಡಾ ಸಮಿತಿಗಳ ಸದಸ್ಯರು ಇದ್ದರು, ವಿದ್ಯಾರ್ಥಿನಿಯರಿಂದ ಭರತನಾಟ್ಯ ಜರುಗಿತು. ಆಶಾ ವೀರನಗೌಡ್ರ, ದೀಪಕ ಮತ್ತಿಕಟ್ಟಿ, ಪವಿತ್ರಾ ಕಂಬಾರ, ವೈಷ್ಣವಿ ಮುಧೋಳೆ ವಿವಿಧ ಸಮಿತಿ ಚಟುವಟಿಕೆಗಳ ಪರಿಚಯ ಮಾಡಿದರು. ವಿನಯಾ ವಾಳದ ಸ್ವಾಗತಿಸಿದರು. ಶುಕ್ಲಾ ಶೆಲ್ಲಿಕೇರಿ ನಿರೂಪಿಸಿದರು. ಆದರ್ಶ ಸವದತ್ತಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ