ಆ್ಯಪ್ನಗರ

ಶಿರಹಟ್ಟಿ : ಎಪಿಎಂಸಿ ಪ್ರಾರಂಭಿಸಲು ಮನವಿ

ಶಿರಹಟ್ಟಿ : ಪಟ್ಟಣದಲ್ಲಿಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಸೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

Vijaya Karnataka 19 Aug 2020, 5:00 am
ಶಿರಹಟ್ಟಿ : ಪಟ್ಟಣದಲ್ಲಿಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಸೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 18SHT1_25
ಮಂಗಳವಾರ ಶಿರಹಟ್ಟಿಯಲ್ಲಿಪ್ರಜಾಪರ ವೇದಿಕೆ ವತಿಯಿಂದ ಶಿರಹಟ್ಟಿ ಪಟ್ಟಣದಲ್ಲಿಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಿ ತಾಲೂಕಿನ ರೈತರಿಗೆ ಅನುಕೂಲ ಮಾಡಿಕೊಡಲು ಆಗ್ರಹಿಸಿ ತಹಶೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.


ವೇದಿಕೆ ತಾಲೂಕಾಧ್ಯಕ್ಷ ಹಸನ ತಹಸೀಲ್ದಾರ ಮಾತನಾಡಿ, ಪಟ್ಟಣವು ತಾಲೂಕು ಕೇಂದ್ರವಾಗಿದ್ದು, ರೈತರು ವ್ಯವಸಾಯದಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ರೈತರಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲ. ಇದರಿಂದ ಅನೇಕ ರೈತರಿಗೆ ತೊಂದರೆಯಾಗುತ್ತಿದೆ. ಇಲ್ಲಿರೈತರ ಬೆಳೆಗೆ ಉತ್ತಮ ಬೆಲೆ ಸಿಗದೇ ನಷ್ಟ ಅನುಭವಿಸುತ್ತಿದ್ದಾರೆ. ಎಪಿಎಂಸಿಗೆ ಜಾಗವಿದ್ರೂ ಅದನ್ನು ಸದ್ಬಳಕೆ ಮಾಡಿಕೊಳ್ಳದೇ ಇರುವದರಿಂದ ಹಂದಿಗಳ ತಾಣವಾಗಿದೆ. ಪ್ರತಿ ವರ್ಷ ಈ ಜಾಗವನ್ನು ಸ್ವಚ್ಚತೆ ಮಾಡಿ ಬಿಲ್‌ ಕೀಳುವುದರ ಮೂಲಕ ಸರಕಾರದ ಹಣವನ್ನು ಪೋಲು ಮಾಡುತ್ತಿರುವದರಿಂದ ನಮ್ಮ ರೈತರು ಬೇರೆ ಸ್ಥಳಗಳಿಗೆ ಹೋಗಿ ಬೆಳೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ಎಪಿಎಂಸಿ ಜಾಗವನ್ನು ಅಭಿವೃದ್ದಿಪಡಿಸಿ ರೈತರಿಗೆ ಕೂಲಿಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲದಿದ್ದರೆ ತಹಶೀಲ್ದಾರ ಕಚೇರಿ ಎದುರುಗಡೆ ರೈತರೊಂದಿಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿತಿಳಿಸಿದ್ದಾರೆ.

ಶಶಿಧರ ದೇಗಾವಿ, ಖಲಂದರ ಕಬಾಡಿ, ಎಂ.ಎಂ.ಲಮಾಣಿ, ಮಂಜುನಾಥ ಬಳಿಗಾರ, ಪ್ರವೀಣಕುಮಾರ ಹಡಪದ, ಮಹಮ್ಮದಸಮೀರ ಕಾರಬೂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ