ಆ್ಯಪ್ನಗರ

ಕಿತ್ತೂರಗೆ ಶರಣ ಶ್ರೀ ಪ್ರಶಸ್ತಿ

ಗದಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಣ್ಣಿಗೇರಿ ತಾಲೂಕು ಘಟಕವು ಗದುಗಿನ ಹಿರಿಯ ಗಾಯಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವೀರೇಶ ಕಿತ್ತೂರ ಅವರಿಗೆ ಶರಣ ಶ್ರೀ ಪ್ರಶಸ್ತಿ ಪ್ರಕಟಿಸಿದೆ. ಅಡ್ನೂರ-ರಾಜೂರ-ಗದಗ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ 75ನೇ ವರ್ಷದ ವರ್ಧಂತಿ

Vijaya Karnataka 18 Jan 2020, 5:00 am
ಗದಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಣ್ಣಿಗೇರಿ ತಾಲೂಕು ಘಟಕವು ಗದುಗಿನ ಹಿರಿಯ ಗಾಯಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವೀರೇಶ ಕಿತ್ತೂರ ಅವರಿಗೆ ಶರಣ ಶ್ರೀ ಪ್ರಶಸ್ತಿ ಪ್ರಕಟಿಸಿದೆ. ಅಡ್ನೂರ-ರಾಜೂರ-ಗದಗ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ 75ನೇ ವರ್ಷದ ವರ್ಧಂತಿ ಮಹೋತ್ಸವ, 50ನೇ ವರ್ಷದ ಪಟ್ಟಾಧಿಕಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.20 ರಂದು ಸಂಜೆ 4.30ಕ್ಕೆ ಕಿತ್ತೂರ ಗ್ರಾಮದ ಸಮುದಾಯ ಭವನದಲ್ಲಿನಡೆಯಲಿರುವ ಸಮಾರಂಭದಲ್ಲಿಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಗಾನೂರಿನ ಶಿವಶಾಂತವೀರ ಶರಣರು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಮಣಕವಾಡದ ಮೃತ್ಯುಂಜಯ ಸ್ವಾಮೀಜಿ, ತುಪ್ಪದಕುರಹಟ್ಟಿ ಭೂಸನೂರ ಹಿರೇಮಠದ ವಾಗೀಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಪರಿಷತ್ತು ಪ್ರಕಟಣೆ ತಿಳಿಸಿದೆ.
Vijaya Karnataka Web shri shri award for kittur
ಕಿತ್ತೂರಗೆ ಶರಣ ಶ್ರೀ ಪ್ರಶಸ್ತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ