ಗದಗ : ಬದಲಾದ ಕಾಲದಲ್ಲಿ ಸುದ್ದಿಗಳ ಹರಿವು ಹೆಚ್ಚಾಗಿದ್ದು, ಅವುಗಳಲ್ಲಿನ ವಾಸ್ತವಾಂಶ ಗುರುತಿಸಿ ಪ್ರಕಟಿಸುವ ಮೂಲಕ ಸಾಮಾಜಿಕ ಕಳಕಳಿ ಮತ್ತು ವಿವೇಚನೆಯಿಂದ ಹೆಜ್ಜೆಯಿಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಶನಿವಾರ ನಗರದ ಸರಕಾರಿ ನೌಕರರ ಭವನದಲ್ಲಿ ಗದಗ ಜಿಲ್ಲಾ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊದಲು ಪತ್ರಕರ್ತರು ಸುದ್ದಿಗಳನ್ನು ಹುಡುಕಿಕೊಂಡು ಹೋಗಬೇಕಾದ ಪರಿಸ್ಥಿತಿಯಿತ್ತು. ಸಧ್ಯ ಕಾಲ ಬದಲಾಗಿದೆ, ಸುದ್ದಿಗಳು ಹರಿವು ಹೆಚ್ಚಾಗಿದೆ. ಅವುಗಳ ಸತ್ಯಾಸತ್ಯತೆ ಪರಿಶೀಲಿಸಿ ಪ್ರಕಟಿಸುವ ಕಾಲ ಬಂದಿದೆ ಎಂದರು.
ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ. ಚಂದೂನವರ ಮಾತನಾಡಿ, ಪತ್ರಿಕೋದ್ಯಮ ಜನರ ಧ್ವನಿಯಾಗಿದೆ. ಸಾರ್ವಜನಿಕರ ಸಮಸ್ಯೆಗೆ ಜೀವಂತಿಕೆ ಕೊಟ್ಟು ಸಮಸ್ಯೆ ಪರಿಹರಿಸುವ ಕಾಯಕ ವರದಿಗಾರನದ್ದಾಗಿದೆ. ಆದರೆ, ವಿದ್ಯುನ್ಮಾನ ಮಾಧ್ಯಮದ ಪ್ರಭಾವದಿಂದ ವರದಿಗಾರರು ಒತ್ತಡ ಅನುಭವಿಸುತ್ತಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಮುದ್ರಣ ಮಾಧ್ಯಮಗಳು ಕ್ಷೀಣಿಸುತ್ತಿದೆ. ಡಿಜಿಟಲ್, ವೆಬ್ ಮೀಡಿಯಾ, ಇಂಟರ್ನೆಟ್ ಮೀಡಿಯಾ ಪ್ರಭಾವಶಾಲಿಯಾಗಿ ಬೆಳೆಯುತ್ತಿದೆ. ಇದರಿಂದ ವರದಿಗಾರರ ಸಂಖ್ಯೆ ಕಡಿಮೆಯಾಗಿ ನಾಗರಿಕ ಪತ್ರಿಕೋದ್ಯಮ ಬೆಳೆಯಲು ಕಾರಣವಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಪತ್ರಕರ್ತರು ಸಮಾಜಮುಖಿ ಕೆಲಸ ಮಾಡುವ ಮೂಲಕ ದೇಶದ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ವಿವಿಧ ಇಲಾಖೆಗಳು ನಡೆಸುತ್ತಿರುವ ಕಳಪೆ ಕಾಮಗಾರಿ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಸುದ್ದಿಗಳನ್ನು ಬಿತ್ತರಿಸುವ ಮಲಕ ಅಧಿಕಾರಿಗಳನ್ನು ಎಚ್ಚರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿದರು. ಗದಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಂ. ಶರೀಪ್ಪನವರ ಅಧ್ಯಕ್ಷ ತೆ ವಹಿಸಿದ್ದರು. ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಮತ್ತಿಕೇರಿ ಜಯರಾಮ್, ಕಾರ್ಯದರ್ಶಿ ಸಂಜೀವರಾವ್ ಕುಲಕರ್ಣಿ, ಲೋಚನೇಶ ಹೂಗಾರ, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಕಾನಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ ಹೊಂಬಾಳಿ, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಕರ ಕುದರಿಮೋತಿ, ಮಂಜುನಾಥ ಅಬ್ಬಿಗೇರಿ, ರಾಜು ಹೆಬ್ಬಳ್ಳಿ ಉಪಸ್ಥಿತರಿದ್ದರು.ಶಿವಕುಮಾರ ಕುಷ್ಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಕುಮಾರ ಹಂಪಿ ಸ್ವಾಗತಿಸಿದರು. ಆನಂದಯ್ಯ ವಿರಕ್ತಮಠ ನಿರೂಪಿಸಿದರು.
ಶನಿವಾರ ನಗರದ ಸರಕಾರಿ ನೌಕರರ ಭವನದಲ್ಲಿ ಗದಗ ಜಿಲ್ಲಾ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊದಲು ಪತ್ರಕರ್ತರು ಸುದ್ದಿಗಳನ್ನು ಹುಡುಕಿಕೊಂಡು ಹೋಗಬೇಕಾದ ಪರಿಸ್ಥಿತಿಯಿತ್ತು. ಸಧ್ಯ ಕಾಲ ಬದಲಾಗಿದೆ, ಸುದ್ದಿಗಳು ಹರಿವು ಹೆಚ್ಚಾಗಿದೆ. ಅವುಗಳ ಸತ್ಯಾಸತ್ಯತೆ ಪರಿಶೀಲಿಸಿ ಪ್ರಕಟಿಸುವ ಕಾಲ ಬಂದಿದೆ ಎಂದರು.
ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ. ಚಂದೂನವರ ಮಾತನಾಡಿ, ಪತ್ರಿಕೋದ್ಯಮ ಜನರ ಧ್ವನಿಯಾಗಿದೆ. ಸಾರ್ವಜನಿಕರ ಸಮಸ್ಯೆಗೆ ಜೀವಂತಿಕೆ ಕೊಟ್ಟು ಸಮಸ್ಯೆ ಪರಿಹರಿಸುವ ಕಾಯಕ ವರದಿಗಾರನದ್ದಾಗಿದೆ. ಆದರೆ, ವಿದ್ಯುನ್ಮಾನ ಮಾಧ್ಯಮದ ಪ್ರಭಾವದಿಂದ ವರದಿಗಾರರು ಒತ್ತಡ ಅನುಭವಿಸುತ್ತಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಮುದ್ರಣ ಮಾಧ್ಯಮಗಳು ಕ್ಷೀಣಿಸುತ್ತಿದೆ. ಡಿಜಿಟಲ್, ವೆಬ್ ಮೀಡಿಯಾ, ಇಂಟರ್ನೆಟ್ ಮೀಡಿಯಾ ಪ್ರಭಾವಶಾಲಿಯಾಗಿ ಬೆಳೆಯುತ್ತಿದೆ. ಇದರಿಂದ ವರದಿಗಾರರ ಸಂಖ್ಯೆ ಕಡಿಮೆಯಾಗಿ ನಾಗರಿಕ ಪತ್ರಿಕೋದ್ಯಮ ಬೆಳೆಯಲು ಕಾರಣವಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಪತ್ರಕರ್ತರು ಸಮಾಜಮುಖಿ ಕೆಲಸ ಮಾಡುವ ಮೂಲಕ ದೇಶದ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ವಿವಿಧ ಇಲಾಖೆಗಳು ನಡೆಸುತ್ತಿರುವ ಕಳಪೆ ಕಾಮಗಾರಿ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಸುದ್ದಿಗಳನ್ನು ಬಿತ್ತರಿಸುವ ಮಲಕ ಅಧಿಕಾರಿಗಳನ್ನು ಎಚ್ಚರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿದರು. ಗದಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಂ. ಶರೀಪ್ಪನವರ ಅಧ್ಯಕ್ಷ ತೆ ವಹಿಸಿದ್ದರು. ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಮತ್ತಿಕೇರಿ ಜಯರಾಮ್, ಕಾರ್ಯದರ್ಶಿ ಸಂಜೀವರಾವ್ ಕುಲಕರ್ಣಿ, ಲೋಚನೇಶ ಹೂಗಾರ, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಕಾನಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ ಹೊಂಬಾಳಿ, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಕರ ಕುದರಿಮೋತಿ, ಮಂಜುನಾಥ ಅಬ್ಬಿಗೇರಿ, ರಾಜು ಹೆಬ್ಬಳ್ಳಿ ಉಪಸ್ಥಿತರಿದ್ದರು.ಶಿವಕುಮಾರ ಕುಷ್ಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಕುಮಾರ ಹಂಪಿ ಸ್ವಾಗತಿಸಿದರು. ಆನಂದಯ್ಯ ವಿರಕ್ತಮಠ ನಿರೂಪಿಸಿದರು.