ಆ್ಯಪ್ನಗರ

ರೈತರ ಅಭಿವೃದ್ಧಿಗೆ ಶ್ರಮಿಸಿ

ಗಜೇಂದ್ರಗಡ: ಕೃಷಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ ಸದ್ಭಳಕೆ ಮಾಡಿಕೊಂಡು, ಸದಾ ಅವರ ಮನದಲ್ಲಿನೆಲೆಯೂರಬೇಕು ಅಂದಾಗ ಮಾತ್ರ ರೈತರ ಅಭಿವೃದ್ಧಿ ಜತೆಗೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

Vijaya Karnataka 31 May 2020, 5:00 am
ಗಜೇಂದ್ರಗಡ: ಕೃಷಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ ಸದ್ಭಳಕೆ ಮಾಡಿಕೊಂಡು, ಸದಾ ಅವರ ಮನದಲ್ಲಿನೆಲೆಯೂರಬೇಕು ಅಂದಾಗ ಮಾತ್ರ ರೈತರ ಅಭಿವೃದ್ಧಿ ಜತೆಗೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
Vijaya Karnataka Web strive for the development of farmers
ರೈತರ ಅಭಿವೃದ್ಧಿಗೆ ಶ್ರಮಿಸಿ


ಹೊಳೆಆಲೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ರಾಜಣ್ಣ ಹೂಲಿ ಹಾಗೂ ಬಿಜೆಪಿ ರೋಣ ಮಂಡಲ ಮಾಜಿ ಅಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ ಅವರನ್ನು ಸನ್ಮಾನಿಸಿ ಮಾತನಾಡಿದರು.

ಅಧಿಕಾರ ಎಂದಿಗೂ ಶಾಶ್ವತವಲ್ಲ. ಆದರೆ, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂದು ರೈತಾಪಿ ವರ್ಗ ಎದುರಿಸುತ್ತಿರುವ ಹಲವು ಸಮಸ್ಯೆಗೆ ಸೂಕ್ತ ಪರಿಹಾರ ಮಾರ್ಗ ಕಂಡುಕೊಳ್ಳುತ್ತ, ರೈತರ ಏಳ್ಗೆಗೆ ಹಗಲಿರುಳು ಶ್ರಮಿಸಬೇಕು ಎಂದರು.

ರಾಜಣ್ಣ ಹೂಲಿ ಸನ್ಮಾನ ಸ್ವೀಕರಿಸಿ,ಈ ದೇಶಕ್ಕೆ ಅನ್ನ ನೀಡುವ ರೈತರಿಗೆ ಸಕಾಲಕ್ಕೆ ಸರಕಾರದ ಸೌಲಭ್ಯ ದೊರಕಿಸಿಕೊಡುವುದು ಸೇರಿದಂತೆ ಕೃಷಿ ಉತ್ಪನ ಮಾರುಕಟ್ಟೆ ಸಮಿತಿಯೊಂದಿಗೆ ರೈತರ ಸಮಸ್ಯೆಗೆ ಸ್ಪಸಂದಿಸುವುದಾಗಿ ಹೇಳಿದರು.

ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಅಮರೇಶ ಬಳಗೇರಿ, ಕನಕಪ್ಪ ಅರಳಿಗಿಡದ, ಬಾಳು ಗೌಡರ, ಅಂಬರೇಶ ಅರಳಿ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ