ಆ್ಯಪ್ನಗರ

ಗದಗ: ತಂದೆಯನ್ನು ಕಳೆದುಕೊಂಡ ದುಃಖದ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆ ಕಣ್ಣೇದುರಲ್ಲಿಯೇ ಮೃತಪಟ್ಟಿದ್ದರೂ, ನೋವನ್ನು ಸಹಿಸಿಕೊಂಡ ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಕರುಣಾಜನಕ ಘಟನೆ ಗದಗದಲ್ಲಿ ನಡೆದಿದೆ.

Vijaya Karnataka Web 3 Jul 2020, 12:54 pm
ಗದಗ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯುತ್ತಿದ್ದು, ವರ್ಷದಿಂದ ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿನಿಯೊಬ್ಬಳು ತಂದೆಯನ್ನು ಕಳೆದುಕೊಂಡ ದುಃಖದಲ್ಲೇ ಪರೀಕ್ಷೆ ಬರೆದ ಘಟನೆ ಗದಗದಲ್ಲಿ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ನಗರದ ರೆಡ್ಡಿ ಕಾಲೇಜ್ ನಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಅನೂಷ ಎಂಬ ವಿದ್ಯಾರ್ಥಿನಿಯೇ ತನ್ನ ತಂದೆಯನ್ನು ಕಳೆದುಕೊಂಡಿದ್ದು, ಧೃತಿಗೆಡದೇ ಪರೀಕ್ಷೆಗೆ ಹಾಜರಾಗಿದ್ದಾಳೆ.

ಈಕೆಯ ತಂದೆ ಸುರೇಶ್ ಭಜಂತ್ರಿ ನಗರದ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುರೇಶ್ ಜು.3ರಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ನೀನು ಪರೀಕ್ಷೆ ಬರೆದು ಬರುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಕುಟುಂಬಸ್ಥರ ಅಭಯ ನೀಡಿದ‌ ನಂತರ ನೋವಿನಲ್ಲೂ ಅನೂಷ ಪರೀಕ್ಷೆ ಬರೆಯಲು ತೆರಳಿದ್ದಾಳೆ.

ಈ ವೇಳೆ ಅನೂಷ ಓದುತ್ತಿರುವ ತೋಂಟದಾರ್ಯ ಶಾಲೆಯ ಸಿಬ್ಬಂದಿ ಹಾಗೂ ಗದಗ ನಗರದ ಬಿಇಒ ಕೆಳದಿಮಠ, ಅನೂಷಗೆ ಮಾನಸಿಕ ಸ್ಥೈರ್ಯ ತುಂಬಿ ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ