ಆ್ಯಪ್ನಗರ

ಸಿರಿಧಾನ್ಯ ಬೆಳೆದ ರೈತರಿಗೆ ಸಹಾಯಧನ

ಗದಗ: ಜಿಲ್ಲೆಯಲ್ಲಿಕೃಷಿ ಇಲಾಖೆಯಿಂದ ನಾನಾ ಯೋಜನೆಗಳು ಜಾರಿಯಲ್ಲಿದ್ದು 1 ಜಂಟಿ ಕೃಷಿ ನಿರ್ದೇಶಕರ ಕಚೇರಿ, 2 ಉಪ ಕೃಷಿ ನಿರ್ದೇಶಕರ ಕಚೇರಿ, 5 ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಪ್ರತಿ ತಾಲೂಕಿಗೆ 2 ರೈತ ಸಂಪರ್ಕ ಕೇಂದ್ರ ಸೇರಿದಂತೆ ಒಟ್ಟು 11 ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೌಲಭ್ಯ

Vijaya Karnataka 4 Jan 2020, 5:00 am
ಗದಗ: ಜಿಲ್ಲೆಯಲ್ಲಿಕೃಷಿ ಇಲಾಖೆಯಿಂದ ನಾನಾ ಯೋಜನೆಗಳು ಜಾರಿಯಲ್ಲಿದ್ದು 1 ಜಂಟಿ ಕೃಷಿ ನಿರ್ದೇಶಕರ ಕಚೇರಿ, 2 ಉಪ ಕೃಷಿ ನಿರ್ದೇಶಕರ ಕಚೇರಿ, 5 ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಪ್ರತಿ ತಾಲೂಕಿಗೆ 2 ರೈತ ಸಂಪರ್ಕ ಕೇಂದ್ರ ಸೇರಿದಂತೆ ಒಟ್ಟು 11 ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೌಲಭ್ಯ ಒದಗಿಸಲಾಗುತ್ತಿದೆ.
Vijaya Karnataka Web subsidy for farmers
ಸಿರಿಧಾನ್ಯ ಬೆಳೆದ ರೈತರಿಗೆ ಸಹಾಯಧನ


ರೈತಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆದ ರೈತರಿಗೆ 1 ಹೆಕ್ಟೇರ್‌ಗೆ 10,000 ರೂ. ಸಹಾಯಧನವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.ಕರಪತ್ರ, ವಾಟ್ಸ್‌ ಆ್ಯಪ್‌ ಗ್ರುಪ್‌, ರೇಡಿಯೋ, ಕೃಷಿ ಅಭಿಯಾನ ಪ್ರಚಾರ ಕಾರ್ಯಕ್ರಮಗಳ ಮೂಲಕ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ವನ್ನು 3 ಕಂತುಗಳಲ್ಲಿನೀಡಲಾಗುತ್ತಿದೆ. ಕೇಂದ್ರದ 6 ಸಾವಿರ ರೂ. ಜತೆಗೆ ರಾಜ್ಯ ಸರಕಾರದಿಂದ 4 ಸಾವಿರ ರೂ. ಸೇರಿದಂತೆ ಒಟ್ಟು 10,000 ರೂ.ನೀಡಲಾಗುತ್ತಿದೆ. ಒಟ್ಟು 1,36000 ಫಲಾನುಭವಿಗಳು ಸೌಲಭ್ಯ ಪಡೆದುಕೊಂಡಿರುತ್ತಾರೆ. ಬೀಜ ವಿತರಣೆ, ಸಾವಯವ ಗೊಬ್ಬರ, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣ, ಕೃಷಿ ಸಂಸ್ಕರಣೆ ಉಪಕರಣಗಳು, ಕೃಷಿ ಪರಿಕರ ಸೌಲಭ್ಯಗಳನ್ನು ರೈತರಿಗೆ ಒದಗಿಸುತ್ತಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ