ಆ್ಯಪ್ನಗರ

ಮತದಾರರಿಗೆ ಕೃತಜ್ಞತಾ ಸಮಾರಂಭ ನಾಳೆ

ಗದಗ: ನಗರದ ತೊಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಜೂ.7 ರಂದು ಸಂಜೆ 6ಕ್ಕೆ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯಭೇರಿ ಬಾರಿಸಿದ ಸಂಸದ ಶಿವಕುಮಾರ ಉದಾಸಿ ಅವರಿಂದ ಗದಗ ವಿಧನಸಭಾ ಕ್ಷೇತ್ರದ ಮತದಾರರಿಗೆ ಕೃಜತ್ಞತಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Vijaya Karnataka 6 Jun 2019, 5:00 am
ಗದಗ: ನಗರದ ತೊಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಜೂ.7 ರಂದು ಸಂಜೆ 6ಕ್ಕೆ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯಭೇರಿ ಬಾರಿಸಿದ ಸಂಸದ ಶಿವಕುಮಾರ ಉದಾಸಿ ಅವರಿಂದ ಗದಗ ವಿಧನಸಭಾ ಕ್ಷೇತ್ರದ ಮತದಾರರಿಗೆ ಕೃಜತ್ಞತಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
Vijaya Karnataka Web thanks for voters
ಮತದಾರರಿಗೆ ಕೃತಜ್ಞತಾ ಸಮಾರಂಭ ನಾಳೆ


ಶಾಸಕ ಜಗದೀಶ ಶೆಟ್ಟರ ಸಮಾರಂಭ ಉದ್ಘಾಟಿಸುವರು. ಅಧ್ಯಕ್ಷ ತೆ ಶಾಸಕ ಸಿ.ಸಿ.ಪಾಟೀಲ ವಹಿಸುವರು. ಶಾಸಕ ಬಸವರಾಜ ಬೊಮ್ಮಾಯಿ, ಶಾಸಕ ಕಳಕಪ್ಪ ಬಂಡಿ, ಶಾಸಕ ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಎಂ.ಎಸ್‌.ಕರೀಗೌಡ್ರ, ಅನಿಲ ಮೆಣಸಿನಕಾಯಿ, ಕಾಂತೀಲಾಲ ಬನ್ಸಾಲಿ, ಮೋಹನ ಮಾಳಶೆಟ್ಟಿ, ಶ್ರೀಪತಿ ಉಡುಪಿ, ರಾಜು ಕುರಡಗಿ, ರಾಮಣ್ಣ ಶಿಂಗಟಾಲಕೇರಿ ಭಾಗಹಿಸುವರು.

ಜೂ.7 ರಂದು ಸಾಯಂಕಾಲ 3.30ಕ್ಕೆ ನಗರದ ಒಕ್ಕಲಗೇರಿ ಓಣಿ ರಾಚೋಟೇಶ್ವರ ದೇವಸ್ಥಾನದಿಂದ ವಿಜಯೋತ್ಸವದ ಮೆರವಣಿಗೆ ಪ್ರಾರಂಭವಾಗಲಿದ್ದು, ನಗರದ ಪ್ರಮುಖ ರಸ್ತೆಗಳಾದ ಪಾಶ್ವನಾಥ ರಸ್ತೆ, ಹಳೆ ಸರಾಫ್‌ ಬಜಾರ್‌, ಚವಡಿಕೂಟ್‌, ಹುಯಿಲಗೋಳ ನಾರಾಯಣರಾವ್‌ ವೃತ್ತ, ಮಹೇಂದ್ರಕರ್‌ ಸರ್ಕಲ್‌ ಮುಖಾಂತರ ತೊಂಟದಾರ್ಯ ಮಠವನ್ನು ತಲುಪಿ, ತೊಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಸಭೆಯಾಗಿ ಮಾರ್ಪಡುವುದು ಎಂದು ನಗರ ಬಿಜೆಪಿ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ