ಆ್ಯಪ್ನಗರ

ಯೋಜನೆ ವಿಳಂಬಕ್ಕೆ ಬಿಜೆಪಿ ಕಾರಣ

ಗದಗ : ಮಲಪ್ರಭಾ ಬಲದಂಡೆ ಕಾಲುವೆ ದುರಸ್ತಿಗೆ ಹಿಂದಿನ ಕಾಂಗ್ರೆಸ್‌ ಸರಕಾರ 1120 ಕೋಟಿ ರೂ. ಯೋಜನೆ ರೂಪಿಸಿತ್ತು. ಮೊದಲ ಹಂತದಲ್ಲಿ 920 ಕೋಟಿ ರೂ. ಸಹ ಬಿಡುಗಡೆಯಾಗಿತ್ತು. ಯೋಜನೆ ಜಾರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸಹಿತ ಅನೇಕ ಮುಖಂಡರು ಅಡ್ಡಿಪಡಿಸಿದ್ದರಿಂದ ಕಾಮಗಾರಿ ವಿಳಂಬವಾಗಲು ಕಾರಣವಾಗಿದೆ ಎಂದು ಮಾಜಿ ಶಾಸಕ ಬಿ.ಆರ್‌. ಯಾವಗಲ್‌ ಆರೋಪಿಸಿದರು.

Vijaya Karnataka 4 Dec 2018, 5:00 am
ಗದಗ : ಮಲಪ್ರಭಾ ಬಲದಂಡೆ ಕಾಲುವೆ ದುರಸ್ತಿಗೆ ಹಿಂದಿನ ಕಾಂಗ್ರೆಸ್‌ ಸರಕಾರ 1120 ಕೋಟಿ ರೂ. ಯೋಜನೆ ರೂಪಿಸಿತ್ತು. ಮೊದಲ ಹಂತದಲ್ಲಿ 920 ಕೋಟಿ ರೂ. ಸಹ ಬಿಡುಗಡೆಯಾಗಿತ್ತು. ಯೋಜನೆ ಜಾರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸಹಿತ ಅನೇಕ ಮುಖಂಡರು ಅಡ್ಡಿಪಡಿಸಿದ್ದರಿಂದ ಕಾಮಗಾರಿ ವಿಳಂಬವಾಗಲು ಕಾರಣವಾಗಿದೆ ಎಂದು ಮಾಜಿ ಶಾಸಕ ಬಿ.ಆರ್‌. ಯಾವಗಲ್‌ ಆರೋಪಿಸಿದರು.
Vijaya Karnataka Web the bjp is responsible for planning delays
ಯೋಜನೆ ವಿಳಂಬಕ್ಕೆ ಬಿಜೆಪಿ ಕಾರಣ


ಸೋಮವಾರ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲಪ್ರಭಾ ಕಾಲುವೆ ದುರಸ್ಥಿಗೆ ಹಿಂದಿನ ಸರಕಾರ ಸಾವಿರಾರು ಕೋಟಿ ರೂ. ನೀಡಿದೆ. ಕಾಮಗಾರಿಯ ಗುತ್ತಿಗೆ ಪಡೆದ ಕಂಪನಿ ಗುಣಮಟ್ಟದ ಕಾಮಗಾರಿ ಮಾಡಿದೆ. ಇನ್ನು 200 ಕೋಟಿ ರೂ. ವೆಚ್ಚದ ಕಾಮಗಾರಿ ಮಾತ್ರ ಬಾಕಿ ಇರುವ ಮಾಹಿತಿ ಇದೆ ಎಂದ ಅವರು, ಈಚೆಗೆ ಕಾಲುವೆ ಒಡೆದ ಅಪಾರ ಪ್ರಮಾಣದ ಬೆಳೆ ಹಾನಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಲುವೆ ಮೇಲಿನ ಭಾಗದ ರೈತರು ನೀರು ಪಡೆಯದ ಕಾರಣ, ಕೆಳ ಭಾಗಕ್ಕೆ ಸಾಕಷ್ಟು ಪ್ರಮಾಣದ ನೀರು ಹರಿದಿದ್ದರಿಂದ ಕಾಲುವೆ ಒಡೆದಿದೆ. ಆ ಅವಘಡದಲ್ಲಿ ಅಧಿಕಾರಿಗಳದ್ದು ತಪ್ಪಿದೆ ಎಂದರು.

ಮಲಪ್ರಭಾ ಬಲದಂಡೆ ಕಾಲುವೆಗೆ ಡಿ. 5ರ ವರೆಗೆ ಮಾತ್ರ ನೀರು ಹರಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ರೈತ ಬಿತ್ತಿದ ಬೆಳೆ ಬರಬೇಕಾದರೆ ಜನವರಿ ಅಂತ್ಯದ ವರೆಗೂ ನೀರು ಹರಿಸಬೇಕು. ಸಧ್ಯ ಡ್ಯಾಂನಲ್ಲಿ 12 ಟಿಎಂಸಿ ನೀರಿದ್ದು, 7.5 ಟಿಎಂಸಿ ನೀರು ಉಳಿಸಿಕೊಂಡು ಇನ್ನುಳಿದ ನೀರನ್ನು ಕಾಲುವೆಗೆ ಹರಿಸುವಂತೆ ಒತ್ತಾಯಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ