ಆ್ಯಪ್ನಗರ

ದೇಶಕ್ಕೆ ಕಾಂಗ್ರೆಸ್‌ ಅಗತ್ಯ

ಲಕ್ಷ್ಮೇಶ್ವರ : ಐದು ವರ್ಷಗಳಲ್ಲಿ ಕೇಂದ್ರದ ಎನ್‌ಡಿಎ ಸರಕಾರ ದೇಶವನ್ನು ದಿವಾಳಿ ಅಂಚಿಗೆ ತಲುಪಿಸಿದ್ದು, ಅದಕ್ಕಾಗಿ ದೇಶಕ್ಕೆ ಕಾಂಗ್ರೆಸ್‌ ಪಕ್ಷ ಅನಿವಾರ್ಯವಾಗಿದೆ ಎಂದು ಹಾವೇರಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ್‌ ಹೇಳಿದರು.

Vijaya Karnataka 18 Apr 2019, 5:00 am
ಲಕ್ಷ್ಮೇಶ್ವರ : ಐದು ವರ್ಷಗಳಲ್ಲಿ ಕೇಂದ್ರದ ಎನ್‌ಡಿಎ ಸರಕಾರ ದೇಶವನ್ನು ದಿವಾಳಿ ಅಂಚಿಗೆ ತಲುಪಿಸಿದ್ದು, ಅದಕ್ಕಾಗಿ ದೇಶಕ್ಕೆ ಕಾಂಗ್ರೆಸ್‌ ಪಕ್ಷ ಅನಿವಾರ್ಯವಾಗಿದೆ ಎಂದು ಹಾವೇರಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ್‌ ಹೇಳಿದರು.
Vijaya Karnataka Web GDG-17LXR02
ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿಯಲ್ಲಿ ಮತಯಾಚನೆ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ್‌ ಮಾತನಾಡಿದರು.


ಅವರು ತಾಲೂಕಿನ ಯಳವತ್ತಿಯಲ್ಲಿ ಮತಯಾಚನೆ ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಸುಳ್ಳು ಆಶ್ವಾಸನೆ ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದು, ದೇಶದ ಜನತೆ ಬಿಜೆಪಿ ಬಗ್ಗೆ ಭ್ರಮನಿರಸನಗೊಂಡಿದೆ. 55 ವರ್ಷಗಳ ಕಾಂಗ್ರೆಸ್‌ ಪಕ್ಷ ಸಾಧನೆಯನ್ನೇ ಮಾಡಿಲ್ಲ ಎಂದು ಜನತೆಯ ಹಾದಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದೆ. ಕೇವಲ 5 ವರ್ಷಗಳಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ನೋಟ್‌ ಬ್ಯಾನ್‌, ಜಿಎಸ್‌ಟಿ ಇವುಗಳಿಂದ ಜನತೆಯನ್ನು ಹಿಂಡಿ ಹಿಪ್ಪಿ ಮಾಡಿದ್ದು, ದೇಶದಲ್ಲಿ ಮೋದಿ ವಿರೋಧಿ ಅಲೆ ಎದ್ದಿದೆ. ಪ್ರಸ್ತುತ ಲೋಕಸಭೆಯಲ್ಲಿ ಯಾವುದೇ ಮೋಡಿ ನಡೆಯುವುದಿಲ್ಲ ಮತದಾರರು ಜ್ಞಾನವಂತರಾಗಿದ್ದು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಆರಂಭವಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಮತ್ತು ಈಗಿನ ಮೈತ್ರಿ ಸರಕಾರದ ಸಾಧನೆಗಳು ಹಾಗೂ ಕಾಂಗ್ರೆಸ್‌ ಪಕ್ಷ ದ ಪ್ರಣಾಳಿಕೆ ಜನತೆಯ ವಿಶ್ವಾಸಕ್ಕೆ ಹತ್ತಿರವಾಗಿದೆ. ಈ ಬಾರಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದರು.

ಮಾಜಿ ಶಾಸಕರಾದ ಜಿ.ಎಸ್‌.ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಜಿಪಂ ಅಧ್ಯಕ್ಷ ಎಸ್‌.ಪಿ.ಬಳಿಗಾರ, ಟಿ.ಈಶ್ವರ, ಎಂ.ಎಸ್‌.ದೊಡ್ಡಗೌಡ್ರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶೇಖರಗೌಡ ಪಾಟೀಲ, ಹುಮಾಯನ್‌ ಮಾಗಡಿ, ವಿರುಪಾಕ್ಷ ಪ್ಪ ನಂದೆಣ್ಣವರ, ಗೀತಾ ಬೀರಣ್ಣವರ, ಬಸಣ್ಣ ಮಲ್ಲರೆಡ್ಡಿ, ಶಿವಣ್ಣ ಗಾಣಗೇರ, ಜಿ.ವಿ.ಪಾಟೀಲ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ