ಆ್ಯಪ್ನಗರ

ರಜೆ ಮೇಲೆ ಬಂದಿದ್ದ ಯೋಧ ಸಾವು

ಗದಗ : ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿನಡೆದಿದೆ.

Vijaya Karnataka 24 Apr 2020, 5:00 am
ಗದಗ : ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿನಡೆದಿದೆ.
Vijaya Karnataka Web the death of a soldier who was on vacation
ರಜೆ ಮೇಲೆ ಬಂದಿದ್ದ ಯೋಧ ಸಾವು


ವೀರಪ್ಪ ತಹಶೀಲ್ದಾರ್‌ (34) ಮೃತಪಟ್ಟ ಯೋಧ. ರಜೆ ಮೇಲೆ ತಿಂಗಳ ಹಿಂದೆಯೇ ಊರಿಗೆ ಬಂದಿದ್ದ ವೀರೇಶ, ನಿಮೋನಿಯಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಹೀಗಾಗಿ ಗದಗ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ಕೋವಿಡ್‌ -19 ಪರೀಕ್ಷೆಗೂ ಒಳಪಡಿಸಲಾಗಿತ್ತು. ವರದಿಯೂ ನಕಾರಾತ್ಮಕವಾಗಿ ಬಂದಿತ್ತು. ಬುಧವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೆಮೃತಪಟ್ಟಿದ್ದಾರೆ.

ಯೋಧ ವೀರೇಶ 158 ಬಟಾಲಿಯನ್‌ ಬಿಎಸ್‌ಎಫ್‌ ವೆಸ್ಟ್‌ ಬೆಂಗಾಲ್‌ನಲ್ಲಿ2006ರಿಂದ ಸೇವೆ ಸಲ್ಲಿಸುತ್ತಿದ್ದರು. ಏ.15ಕ್ಕೆ ರಜೆ ಮುಗಿದಿತ್ತು. ಲಾಕ್‌ಡೌನ್‌ ಕಾರಣದಿಂದ ಊರಲ್ಲಿಯೇ ಉಳಿದಿದ್ದರು.

ಯೋಧ ವೀರೇಶ ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಗುರುವಾರ ಸರಕಾರಿ ಗೌರವದೊಂದಿಗೆ, ಕುಟುಂಬದ ಕೆಲವೇ ಕೆಲವು ಜನರ ಸಮ್ಮುಖದಲ್ಲಿಯೋಧನ ಅಂತ್ಯಕ್ರಿಯೆ ನೆರವೇರಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ