ಆ್ಯಪ್ನಗರ

ಶಿಸ್ತು ಬದ್ಧ ಜೀವನ ಯಶಸ್ಸಿಗೆ ನಾಂದಿ

ಗದಗ: ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವ ಮಾತಿನಂತೆ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾಗಿ ಉತ್ತಮ ಜೀವನ ಹೊಂದಬೇಕು ಎಂದು ಹುಲಕೋಟಿಯ ರಾಜರಾಜೇಶ್ವರಿ ಪ್ರೌಢಶಾಲೆಯ ಮುಖ್ಯಶಿಕ್ಷ ಕಿ ಬಿ.ಆರ್‌.ಮಂಗಳಾ ಹೇಳಿದರು. ನಗರದ ವಿದ್ಯಾದಾನ ಸಮಿತಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಕಾಉರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿ ಮಾತನಾಡಿದರು.

Vijaya Karnataka 21 Feb 2019, 5:00 am
ಗದಗ: ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವ ಮಾತಿನಂತೆ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾಗಿ ಉತ್ತಮ ಜೀವನ ಹೊಂದಬೇಕು ಎಂದು ಹುಲಕೋಟಿಯ ರಾಜರಾಜೇಶ್ವರಿ ಪ್ರೌಢಶಾಲೆಯ ಮುಖ್ಯಶಿಕ್ಷ ಕಿ ಬಿ.ಆರ್‌.ಮಂಗಳಾ ಹೇಳಿದರು. ನಗರದ ವಿದ್ಯಾದಾನ ಸಮಿತಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಕಾಉರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿ ಮಾತನಾಡಿದರು.
Vijaya Karnataka Web the discipline is for a successful life success
ಶಿಸ್ತು ಬದ್ಧ ಜೀವನ ಯಶಸ್ಸಿಗೆ ನಾಂದಿ


ಆರ್‌.ಎನ್‌.ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿನಿಯರು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕದಂಥ ಸಹ ಪಠ್ಯಚಟುವಟಿಕೆಗಳಲ್ಲಿ ಭಾಗವಹಿಸಿ ನಾಡಿನ ನಾಳಿನ ಉತ್ತಮ ಪ್ರಜೆಗಳಾಗಿರಿ ಎಂದು ಹೇಳಿದರು.

ವಿದ್ಯಾದಾನ ಸಮಿತಿ ಅಧ್ಯಕ್ಷ ಡಿ.ಬಿ.ಹುಯಿಲಗೋಳ ಮಾತನಾಡಿ, ಯೋಧರ ತ್ಯಾಗ ಬಲಿದಾನದಿಂದ ಇಂದು ನಾವು ಸುಖಕರ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ವಿದ್ಯಾರ್ಥಿನಿಯರು ಮೇಣದ ಬತ್ತಿ ಹಚ್ಚುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಶುಭಲಕ್ಷ್ಮೀ ಹುಯಿಲಗೋಳ, ಎಸ್‌.ಎನ್‌. ಜೋಶಿ, ಜೆ.ಎಸ್‌. ಕಲ್ಯಾಣಿ, ಬಿ ಎಸ್‌ ಹುಲಮನಿಯವರು, ಕರುಣಾ ನವಲೇಕರ, ಅನುಪಮಾ ಕಬ್ಬೇರ, ಜೆ.ಎಸ್‌. ಕಲ್ಯಾಣಿ, ಪ್ರೀಯಾ ಹುಯಿಲಗೋಳ, ಎಸ್‌.ಎಂ. ದೇಶಪಾಂಡೆ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ