ಆ್ಯಪ್ನಗರ

ಆಡಳಿತದಲ್ಲಿ ಮಹಿಳೆ ಪಾತ್ರ ಮುಖ್ಯ

ಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿಯಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗಾಗಿ ವೃತ್ತಿಪರ ತರಬೇತಿ, ವಿವಿಧ ಸರ್ಟಿಫಿಕೇಟ್‌ ಮತ್ತು ಡಿಪ್ಲೋಮಾ ಕೋರ್ಸ್‌ ಜತೆಗೆ ಸ್ಥಳೀಯ ಆಡಳಿತ, ನಿರ್ವಹಣೆ, ಕೌಶಲ ಅಭಿವೃದ್ಧಿ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ವಿವಿ ಕುಲಸಚಿವ ಡಾ. ಸುರೇಶ ನಾಡಗೌಡರ ಹೇಳಿದರು.

Vijaya Karnataka 29 Jun 2019, 5:00 am
ಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿಯಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗಾಗಿ ವೃತ್ತಿಪರ ತರಬೇತಿ, ವಿವಿಧ ಸರ್ಟಿಫಿಕೇಟ್‌ ಮತ್ತು ಡಿಪ್ಲೋಮಾ ಕೋರ್ಸ್‌ ಜತೆಗೆ ಸ್ಥಳೀಯ ಆಡಳಿತ, ನಿರ್ವಹಣೆ, ಕೌಶಲ ಅಭಿವೃದ್ಧಿ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ವಿವಿ ಕುಲಸಚಿವ ಡಾ. ಸುರೇಶ ನಾಡಗೌಡರ ಹೇಳಿದರು.
Vijaya Karnataka Web the role of woman in administration is important
ಆಡಳಿತದಲ್ಲಿ ಮಹಿಳೆ ಪಾತ್ರ ಮುಖ್ಯ


ಶುಕ್ರವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟ- ಸುಗ್ರಾಮ, ದಿ. ಹಂಗರ್‌ ಪ್ರೊಜೆಕ್ಟ್ ಕರ್ನಾಟಕ, ಸ್ಪೂರ್ತಿ ಶೈಕ್ಷ ಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಜಿಲ್ಲೆಯ ಗ್ರಾಪಂ ಮಹಿಳಾ ಪ್ರತಿನಿಧಿಗಳಿಗಾಗಿ ನಡೆದ ಒಂದು ದಿನದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಐಪಂ ಸಿಇಒ ಮಂಜುನಾಥ ಚವ್ಹಾಣ ಮಾತನಾಡಿ, ಗ್ರಾಪಂ ಮಹಿಳಾ ಚುನಾಯಿತ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ನಡೆಸುವುದರಿಂದ ಸ್ಥಳೀಯ ಸಮಸ್ಯೆಗಳ ಪರಿಹಾರ ಸಾಧ್ಯವಾಗುತ್ತದೆ ಎಂದ ಅವರು, ಮಹಿಳಾ ಸದಸ್ಯರ ಜತೆಗೆ ವಸತಿ ಯೋಜನೆ, ಅಧಿಕಾರಿಗಳ ಕೊರತೆ, ಭೂ ಸ್ವಾಧೀನ, ಆಧಾರ್‌ ಕಾರ್ಡ್‌ ಸಮಸ್ಯೆ, ಶೈಕ್ಷ ಣಿಕ, ಕಂದಾಯ ಹಾಗೂ ಆರೋಗ್ಯ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದರು.

ವಿವಿ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಮಾತನಾಡಿ, ಸುಗ್ರಾಮ ಚುನಾಯಿತ ಮಹಿಳಾ ಪ್ರತಿನಿಧಿಗಳ ಗುರಿ ಮತ್ತು ಉದ್ದೇಶಗಳು ವಿಶ್ವವಿದ್ಯಾಲಯದ ಧ್ಯೇಯ ಮತ್ತು ಆಶಯಗಳಿಗೆ ಪೂರಕವಾಗಿದೆ. ಆ ನಿಟ್ಟಿನಲ್ಲಿ ತರಬೇತಿ, ಸಂಶೋಧನೆ ಕಾರ್ಯಾಗಾರದಂತಹ ವಿಭಿನ್ನ ಕಾರ್ಯಕ್ರಮ ರೂಪಿಸಲಾಗುವುದು.

ಸ್ಪೂರ್ತಿ ಸಂಸ್ಥೆಯ ನಿರ್ದೇಶಕ ಎ.ಬಿ.ರೂಪಾ ನಾಯ್ಕ ಅವರು ಸುಗ್ರಾಮ ಪರಿಕಲ್ಪನೆ, ಅದರ ಕಾರ್ಯ ಚಟುವಟಿಕೆ ಹಾಗೂ ಪ್ರಾಮುಖ್ಯತೆ ಕುರಿತು ವಿವರಿಸಿದರು. ಭೂ ಹಕ್ಕು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ರೈತರಿಗೆ ಭೂಮಿ ಕೊಡಿಸುವುದು, ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಾಕಾರಿ ಅನುಷ್ಠಾನವನ್ನೊಳಗೊಂಡಂತೆ ದಾವಣಗೆರೆ ಮತ್ತು ಗದಗ ಜಿಲ್ಲೆಗಳಲ್ಲಿ ತಮ್ಮ ಸಂಸ್ಥೆಯ ಕಾರ್ಯ ಸಾಧನೆಗಳ ಕುರಿತು ಮಾಹಿತಿ ನೀಡಿದರು.

ಜಿಪಂ ಉಪಕಾರ್ಯದರ್ಶಿ ಡಿ. ಪ್ರಾಣೇಶರಾವ್‌, ವಿಶ್ವವಿದ್ಯಾಲಯದ ಗೌರವ ಪ್ರಾಧ್ಯಾಪಕರಾದ ಎನ್‌.ಶಿವಣ್ಣ ಅವರು ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಾಗೂ ಮಹತ್ವ ತಿಳಿಸಿದರು. ಲಕ್ಷ್ಮಣ ಪೂಜಾರ ನಿರೂಪಿಸಿದರು. ಎಂ.ಎ (ಆರ್‌ಡಿಪಿಆರ್‌) ಸಂಯೋಜಕರಾದ ಡಾ. ಶ್ರೀಧರ ಹಾದಿಮನಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ