ಆ್ಯಪ್ನಗರ

ಸಾಮಾಜಿಕ ಅಂತರವೇ ಮದ್ದು

ಗದಗ: ಜಿಲ್ಲೆಯಲ್ಲಿಕೊರೊನಾ ಸೋಂಕು ಪ್ರಕರಣ ಕಡಿಮೆ ಇದ್ದು, ಈಗಲೇ ಸೋಂಕು ವ್ಯಾಪಕವಾಗಿ ಹರಡದಂತೆ ಕಡಿವಾಣ ಹಾಕಬೇಕು. ಸಾಮಾಜಿಕ ಅಂತರ, ಮಾಸ್ಕ್‌ ಬಳಕೆಯಿಂದ ಕೊರೊನಾ ತಡೆಗೆ ಸೂಕ್ತ ಮಾರ್ಗ. ಈ ನಿಟ್ಟಿನಲ್ಲಿಜನರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

Vijaya Karnataka 2 Jul 2020, 5:00 am
ಗದಗ: ಜಿಲ್ಲೆಯಲ್ಲಿಕೊರೊನಾ ಸೋಂಕು ಪ್ರಕರಣ ಕಡಿಮೆ ಇದ್ದು, ಈಗಲೇ ಸೋಂಕು ವ್ಯಾಪಕವಾಗಿ ಹರಡದಂತೆ ಕಡಿವಾಣ ಹಾಕಬೇಕು. ಸಾಮಾಜಿಕ ಅಂತರ, ಮಾಸ್ಕ್‌ ಬಳಕೆಯಿಂದ ಕೊರೊನಾ ತಡೆಗೆ ಸೂಕ್ತ ಮಾರ್ಗ. ಈ ನಿಟ್ಟಿನಲ್ಲಿಜನರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
Vijaya Karnataka Web the social gap is medicine
ಸಾಮಾಜಿಕ ಅಂತರವೇ ಮದ್ದು


ಬುಧವಾರ ಜಿಪಂ ಸಭಾಂಗಣದಲ್ಲಿನಡೆದ ಕೋವಿಡ್‌-19 ನಿಯಂತ್ರಣ ಕುರಿತ ಚುನಾಯಿತ ಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿಅವರು ಮಾತನಾಡಿದರು.

ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮದುವೆ, ಹೋಟೆಲ್‌, ರೆಸ್ಟೋರೆಂಟ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿಹೆಚ್ಚು ಜನರು ಗುಂಪುಗೂಡುವಿಕೆಗೆ ಅವಕಾಶ ಕೊಡಬಾರದು.

ಆಯಾ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಅಲ್ಲಿಮೂಲ ಸೌಲಭ್ಯ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಕೋವಿಡ್‌ ನಿಯಂತ್ರಣಕ್ಕಾಗಿ ರಾತ್ರಿ 8ರಿಂದ ಬೆಳಗಿನ 5 ರವರೆಗೆ ಜಾರಿಯಿರುವ ರಾತ್ರಿ ಪ್ರತಿಬಂಧನೆಯನ್ನು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಜಿಲ್ಲೆಯಲ್ಲಿಕೋವಿಡ್‌-19 ಸೋಂಕು ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರಕಾರದ ನಿಯಮ ಉಲ್ಲಂಘಿಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಿ. ಇಂದಿನ ಸಂದಿಗ್ಧ ಸ್ಥಿತಿಯಲ್ಲಿನಾನಾ ವರ್ಗದ ಫಲಾನುಭವಿಗಳಿಗೆ ನೀಡಲಾಗುವ ಸಾಮಾಜಿಕ ಭದ್ರತೆಯ ಹಣ ಬಿಡುಗಡೆಯಲ್ಲಿವಿಳಂಬವಾಗದಂತೆ ನಿಗಾವಹಿಸಬೇಕು ಎಂದರು.

ಜಿಮ್ಸ್‌ ನಿರ್ದೇಶಕ ಡಾ.ಪಿ.ಎಸ್‌.ಭೂಸರಡ್ಡಿ ಹಾಗೂ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಬಸರಿಗಿಡದ ಮಾತನಾಡಿ, ಜಿಮ್ಸ್‌ ಆಸ್ಪತ್ರೆಯ ಪರೀಕ್ಷಾ ಕೇಂದ್ರದಲ್ಲಿತಾಲೂಕುವಾರು ಕನಿಷ್ಠ 20 ಜನ ಸೇರಿದಂತೆ ದಿನನಿತ್ಯ ಒಟ್ಟು 210 ಜನರ ಗಂಟಲು ದ್ರವ ಪರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಕಳಕಪ್ಪ ಬಂಡಿ, ಜಿಲ್ಲಾಧಿಕಾರಿ ಸುಂದರೇಶ್‌ಬಾಬು ಎಂ., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್‌ ಎಂ., ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ ಮಾತನಾಡಿದರು. ಶಾಸಕ ರಾಮಣ್ಣ ಲಮಾಣಿ, ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಜಿಪಂ ಸಿಇಒ ಡಾ.ಆನಂದ್‌ ಕೆ., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್‌ ಎಂ., ಆರೋಗ್ಯ ಹಾಗೂ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಯಮ ಉಲ್ಲಂಘಿಘಿಸಿದರೆ ದಂಡ ವಿಧಿಸಿ :
ಮಾಸ್ಕ್‌ ಧರಿಸುವಂತೆ ಜಿಲ್ಲೆಯ ಪ್ರತಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಜನರಲ್ಲಿಧ್ವನಿವರ್ಧಕಗಳ ಮೂಲಕ ಹೆಚ್ಚು ಜಾಗೃತಿ ಮೂಡಿಸಬೇಕು. ತಿಳಿವಳಿಕೆ, ಸಲಹೆ, ಜಾಗೃತಿ ಮೂಡಿಸಿದ ಬಳಿಕವೂ ನಿಯಮ ಉಲ್ಲಂಘಿಘಿಸಿದಲ್ಲಿನಿಗದಿಪಡಿಸಿದಂತೆ ದಂಡ ವಿಧಿಸಬೇಕು. ಈ ನಿಟ್ಟಿನಲ್ಲಿಸ್ಥಳೀಯ ಸಂಸ್ಥೆ, ಪೊಲೀಸ್‌ ಇಲಾಖೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಸಿ.ಸಿ.ಪಾಟೀಲ ಹೇಳಿದರು.

65 ಲಕ್ಷ ರೂ. ಬಿಡುಗಡೆ :
ಸೋಂಕಿತ ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿಮಾತ್ರ ಕೋವಿಡ್‌ ಆಸ್ಪತ್ರೆಗೆ ದಾಖಲಿಸಬೇಕು. ಕೋವಿಡ್‌ ನಿಯಂತ್ರಣಕ್ಕಾಗಿ ಜಿಲ್ಲೆಗೆ ಸರಕಾರ ಒಟ್ಟು 65 ಲಕ್ಷ ರೂ. ಬಿಡುಗಡೆ ಮಾಡಿದ್ದು, ಸೋಂಕಿತ ಹಾಗೂ ಶಂಕಿತರಿಗೆ ನೀಡುವ ಆಹಾರದಲ್ಲಿಗುಣಮಟ್ಟ ಹಾಗೂ ಪ್ರಮಾಣ ಕಾಪಾಡಿಕೊಳ್ಳಬೇಕು ಎಂದು ಸಚಿವ ಪಾಟೀಲ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ