ಆ್ಯಪ್ನಗರ

ಕನ್ನಡ ಭಾಷೆ ಶ್ರೀಮಂತಗೊಳಿಸಿದ ಕುವೆಂಪು

ಮುಂಡರಗಿ: ಇಂಗ್ಲಿಷ್‌ ಭಾಷೆ ಹಾಗೂ ಸಾಹಿತ್ಯದಿಂದ ಪ್ರಭಾವಿತರಾಗಿದ್ದ ಕುವೆಂಪು ಅವರು ರಾಮಾಯಣ ದರ್ಶನಂ ಸೇರಿದಂತೆ ಹಲವಾರು ಗ್ರಂಥ ರಚಿಸುವ ಮೂಲಕ ಕನ್ನಡ ಭಾಷೆಯನ್ನು ವಿಶ್ವಕ್ಕೆ ಪರಿಚಯಿಸಿದರು. ವಿಶ್ವ ಮಾನ್ಯ ಸಾಹಿತ್ಯ ರಚಿಸುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತ ಕಾಶೀನಾಥ ಬಿಳಿಮಗ್ಗದ ಹೇಳಿದರು.

Vijaya Karnataka 31 Dec 2019, 5:00 am
ಮುಂಡರಗಿ: ಇಂಗ್ಲಿಷ್‌ ಭಾಷೆ ಹಾಗೂ ಸಾಹಿತ್ಯದಿಂದ ಪ್ರಭಾವಿತರಾಗಿದ್ದ ಕುವೆಂಪು ಅವರು ರಾಮಾಯಣ ದರ್ಶನಂ ಸೇರಿದಂತೆ ಹಲವಾರು ಗ್ರಂಥ ರಚಿಸುವ ಮೂಲಕ ಕನ್ನಡ ಭಾಷೆಯನ್ನು ವಿಶ್ವಕ್ಕೆ ಪರಿಚಯಿಸಿದರು. ವಿಶ್ವ ಮಾನ್ಯ ಸಾಹಿತ್ಯ ರಚಿಸುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತ ಕಾಶೀನಾಥ ಬಿಳಿಮಗ್ಗದ ಹೇಳಿದರು.
Vijaya Karnataka Web they are great for enriching the kannada language
ಕನ್ನಡ ಭಾಷೆ ಶ್ರೀಮಂತಗೊಳಿಸಿದ ಕುವೆಂಪು


ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿಏರ್ಪಡಿಸಿದ್ದ ವಿಶ್ವ ಮಾನವ ಹಾಗೂ ಕುವೆಂಪು ದಿನಾಚರಣೆಯಲ್ಲಿಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಸಿ.ಎಸ್‌.ಅರಸನಾಳ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಸೇವೆಯ ಮೂಲಕ 19ನೇ ಶತಮಾನದ ಸರ್ವ ಶ್ರೇಷ್ಠ ಸಾಹಿತಿಯಾಗಿ ಹೊರಹೊಮ್ಮಿದರು. ತಮ್ಮ ಸಾಹಿತ್ಯದ ಮೂಲಕ ಇಡೀ ಕನ್ನಡ ಸಾಹಿತ್ಯಆವರಿಸಿಕೊಂಡಿದ್ದರು. ಅವರ ಸಾಹಿತ್ಯವನ್ನು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದರು.

ಹಿರಿಯ ಉಪನ್ಯಾಸಕ ಎ.ವಿ.ಹಳ್ಳಿಕೇರಿ, ಪಿ.ಎಂ.ಕಲ್ಲನಗೌಡರ, ಆಶಾಬಿ ಜಹಾಗೀರದಾರ, ಬಿ.ಎಸ್‌.ಜೋಗಿನ, ಮಹಾತೇಶ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ