ಆ್ಯಪ್ನಗರ

ನೂತನ ಮರಳು ನೀತಿಗೆ ಚಿಂತನೆ

ಗದಗ: ರಾಜ್ಯದಲ್ಲಿಸರಕಾರ ಸುಭದ್ರವಾಗಿದ್ದು, ಶೀಘ್ರವೇ ನೂತನ ಮರಳು ನೀತಿ ಜಾರಿಗೊಳಿಸಿ ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

Vijaya Karnataka 14 Dec 2019, 5:00 am
ಗದಗ: ರಾಜ್ಯದಲ್ಲಿಸರಕಾರ ಸುಭದ್ರವಾಗಿದ್ದು, ಶೀಘ್ರವೇ ನೂತನ ಮರಳು ನೀತಿ ಜಾರಿಗೊಳಿಸಿ ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.
Vijaya Karnataka Web thought for a new sand policy
ನೂತನ ಮರಳು ನೀತಿಗೆ ಚಿಂತನೆ


ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ಮರಳುಗಾರಿಕೆ ಮಾತ್ರವಲ್ಲದೆ, ಮಣ್ಣಿನ ಗಣಿಗಾರಿಕೆ, ಕಲ್ಲುಗಣಿಗಾರಿಕೆ, ಕಲ್ಲುಕ್ವಾರಿಗಳಿಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸುವ ನೂತನ ನೀತಿ ರೂಪಿಸಲಾಗುತ್ತಿದ್ದು, ಶೀಘ್ರವೇ ಅದನ್ನು ಪ್ರಕಟಿಸಲಾಗುವುದು ಎಂದರು.

ಮರಳುಗಾರಿಕೆ ಗುತ್ತಿಗೆ ಪಡೆದವರು, ಕಲ್ಲುಕ್ವಾರಿಗಳ ಮಾಲೀಕರ ಸೇರಿದಂತೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಪಡೆಯಲಾಗಿದೆ. ಉದ್ಯಮಸ್ನೇಹಿ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಗದಗ ಜಿಲ್ಲೆಯಲ್ಲಿಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ. ತಕ್ಷಣ ಆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಅಕ್ರಮಕ್ಕೆ ಬ್ರೇಕ್‌ ಹಾಕುವಂತೆ ಸೂಚನೆ ನೀಡಲಾಗಿದೆ. ಅಕ್ರಮ ಮರಳುಗಾರಿಕೆ ತಡೆಯುವ ಸಂಬಂಧ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಅಲ್ಲದೇ ಒಬ್ಬರು ದಕ್ಷ ಹಿರಿಯ ಭೂ ವಿಜ್ಞಾನಿಗಳನ್ನು ನೇಮಕ ಮಾಡಲಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಯಾವುದೇ ಪಕ್ಷದ, ಎಂಥ ಪ್ರಭಾವಿಯೇ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಅಕ್ರಮ ಮರಳುಗಾರಿಕೆ ಮಾತ್ರವಲ್ಲದೇ ತಮಿಳುನಾಡಿನಿಂದ ಅಕ್ರಮವಾಗಿ ಕಲ್ಲುಗಳು ಬರುತ್ತಿದ್ದವು. ಈಗ ಅದು ಬಹುತೇಕ ಬಂದ್‌ ಆಗಿದೆ. ಜತೆಗೆ ಕ್ರಷರ್‌ ಯಂತ್ರಗಳನ್ನು ಹೊಂದಿರುವವರು ನಿಯಮ ಮೀರಿ ಗಣಿಗಾರಿಕೆ ನಡೆಸುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದು, ಹಾಗೇನಾದರೂ ಕಂಡುಬಂದರೆ ಅವರಿಂದ ದಂಡ ಹಾಗೂ ರಾಜಸ್ವ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.

ಸರಕಾರ ನೂರು ದಿನ ಪೂರೈಸಿದರೂ ಗದಗ ಜಿಲ್ಲೆಯ ಅಧಿಕಾರಿಗಳಲ್ಲಿಸರಕಾರ ಸುಭದ್ರವಾಗಿರುವ ಬಗ್ಗೆ ಜಿಜ್ಞಾಸೆ ಇತ್ತು. ಸರಕಾರ ಸುಭದ್ರವಾದ ನಂತರ ಅಧಿಕಾರಿಗಳಿಗೆ ಚಾಟಿ ಬೀಸಿ ಆಡಳಿತಕ್ಕೆ ಚುರುಕು ನೀಡುವ ಇಚ್ಛೆ ಇತ್ತು. ಅದರಂತೆ ಈಗ ಅಧಿಕಾರಿಗಳು ಸಭೆ ನಡೆಸಿ ಸರಕಾರದ ಆಶಯ, ವೇಗಕ್ಕೆ ತಕ್ಕಂತೆ ಕೆಲಸ ಮಾಡಲು ಸೂಚನೆ ವಿನಂತಿಸಲಾಗಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ ಎದುರಿಸಬೇಕಾಗುತ್ತದೆ. ಅದೇ ರೀತಿ ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗಿದೆ ಎಂದರು.

ಕಟ್ಟು ನಿಟ್ಟಿನ ಸೂಚನೆ :
ಗದಗ, ಕೊಪ್ಪಳ ಸೇರಿದಂತೆ ರಾಜ್ಯದಲ್ಲಿಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಹಸೀಲ್ದಾರ್‌ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ ಅಕ್ರಮ ನಡೆದಿರುವುದು ಕಂಡುಬಂದರೆ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ