ಗದಗ: ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಪ್ರಥಮ ಪುಣ್ಯಸ್ಮರಣೆ, ಅನುಭವ ಮಂಟಪ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ಗ್ರಂಥಗಳ ಬಿಡುಗಡೆ, ಪುತ್ಥಳಿ ಅನಾವರಣ ಸಮಾರಂಭ ಜ. ತೋಂಟದಾರ್ಯ ಮಠದಲ್ಲಿಅ. 10ರಂದು ಬೆಳಗ್ಗೆ 10 ಕ್ಕೆ ಜರುಗಲಿದೆ.
2019ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಬಸವ ಟಿವಿ ಮಾಲೀಕ ಈ. ಕೃಷ್ಣಪ್ಪ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರದಾನ ಮಾಡುವರು. ಪ್ರಶಸ್ತಿಯು 5 ಲಕ್ಷ ರೂ. ಮತ್ತು ಸಮ್ಮಾನ ಪತ್ರ ಒಳಗೊಂಡಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗ್ರಂಥ ಬಿಡುಗಡೆಗೊಳಿಸುವರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳು ಪುತ್ಥಳಿ ಅನಾವರಣಗೊಳಿಸುವರು. ಸಚಿವ ಸಿ.ಸಿ. ಪಾಟೀಲ ಅವರು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಲಿದ್ದಾರೆ.
ಆದಿಚುಂಚನಗಿರಿ ಸಂಸ್ಥಾನಮಠದ ನಿರ್ಮಲಾನಂದನಾಥ ಸ್ವಾಮೀಜಿ ಅನುಭವ ಮಂಟಪ ಲೋಕಾರ್ಪಣೆಗೊಳಿಸುವರು. ಶಾಸಕ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀರಾಮುಲು, ಸಂಸದ ಶಿವಕುಮಾರ ಉದಾಸಿ ಇತರರು ಪಾಲ್ಗೊಳ್ಳುವರು.
2019ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಬಸವ ಟಿವಿ ಮಾಲೀಕ ಈ. ಕೃಷ್ಣಪ್ಪ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರದಾನ ಮಾಡುವರು. ಪ್ರಶಸ್ತಿಯು 5 ಲಕ್ಷ ರೂ. ಮತ್ತು ಸಮ್ಮಾನ ಪತ್ರ ಒಳಗೊಂಡಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗ್ರಂಥ ಬಿಡುಗಡೆಗೊಳಿಸುವರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳು ಪುತ್ಥಳಿ ಅನಾವರಣಗೊಳಿಸುವರು. ಸಚಿವ ಸಿ.ಸಿ. ಪಾಟೀಲ ಅವರು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಲಿದ್ದಾರೆ.
ಆದಿಚುಂಚನಗಿರಿ ಸಂಸ್ಥಾನಮಠದ ನಿರ್ಮಲಾನಂದನಾಥ ಸ್ವಾಮೀಜಿ ಅನುಭವ ಮಂಟಪ ಲೋಕಾರ್ಪಣೆಗೊಳಿಸುವರು. ಶಾಸಕ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀರಾಮುಲು, ಸಂಸದ ಶಿವಕುಮಾರ ಉದಾಸಿ ಇತರರು ಪಾಲ್ಗೊಳ್ಳುವರು.