ಆ್ಯಪ್ನಗರ

ಇಂದು ಪತ್ರಿಕಾ ದಿನಾಚರಣೆ

ಗದಗ: ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ಜು.20 ರಂದು ಬೆಳಗ್ಗೆ 10.30ಕ್ಕೆ ನಗರದ ಮುಳಗುಂದ ರಸ್ತೆಯ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.

Vijaya Karnataka 20 Jul 2019, 5:00 am
ಗದಗ: ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ಜು.20 ರಂದು ಬೆಳಗ್ಗೆ 10.30ಕ್ಕೆ ನಗರದ ಮುಳಗುಂದ ರಸ್ತೆಯ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.
Vijaya Karnataka Web today is press day
ಇಂದು ಪತ್ರಿಕಾ ದಿನಾಚರಣೆ


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದು, ಗದಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್‌.ಎಂ. ಶರೀಫನವರ ಅಧ್ಯಕ್ಷ ತೆ ವಹಿಸುವರು. ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ. ಚಂದೂನವರ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಪಂ ಸಿಇಒ ಮಂಜುನಾಥ ಚವ್ಹಾಣ, ಡಿಯುಡಿಸಿ ಜಿಲ್ಲಾ ಯೋಜನಾ ನಿರ್ದೇಶಕ ಎಸ್‌.ಎನ್‌. ರುದ್ರೇಶ್‌, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ್‌, ಕಾರ್ಯನಿರತ ಪತ್ರ ಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್‌ ಹೊಂಬಾಳಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವ ಸ್ಥಾಪಕ ಜಿ.ವಿ. ಶಿರೋಳ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಸದಸ್ಯರಾದ ಲೋಚನೇಶ ಹೂಗಾರ, ಶಿವಕುಮಾರ್‌ ಕುಷ್ಟಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ