ಗದಗ : ಬೆಳಗಾವಿ ವಿಭಾಗ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ಸೆ. 24ರಂದು ಬೆಳಗ್ಗೆ 10.30ಕ್ಕೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿನಡೆಯಲಿದೆ.
ವಿಪ ಸದಸ್ಯ ಎಸ್.ವಿ. ಸಂಕನೂರ ಕಾರ್ಯಕ್ರಮ ಉದ್ಘಾಟಿಸುವರು. ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಎಸ್.ಎಸ್. ಪಾಟೀಲ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ , ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಲ್ಲಾಯುವಜನ ಒಕ್ಕೂಟದ ಅಧ್ಯಕ್ಷ ರವಿಕಾಂತ ಅಂಗಡಿ ಆಗಮಿಸುವರು.
ಪಂದ್ಯಾವಳಿ ಸ್ಥಳ:
ಬೆಳಗಾವಿ ವಿಭಾಗ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟದ ಪಂದ್ಯಾವಳಿ ಕೆ.ಎಚ್. ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿ ಹಾಗೂ ಕಳಸಾಪುರ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿಆಯೋಜಿಸಲಾಗಿದೆ.
ಕೆ.ಎಚ್.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿಅಥ್ಲೆಟಿಕ್, ಖೋಖೋ, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್ , ನೆಟ್ ಬಾಲ್ ಹಾಗೂ ಗದಗನ ಕಳಸಾಪೂರ ರಸ್ತೆ ಯ ಒಳಾಂಗಣ ಕ್ರೀಡಾಂಗಣದಲ್ಲಿ ಕಬಡ್ಡಿ , ಟೀಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಮೇಲ್ಕಂಡ ಕ್ರೀಡೆಗಳಲ್ಲಿಬೆಳಗಾವಿ ವಿಭಾಗೀಯ ಜಿಲ್ಲೆಗಳಿಂದ ಸುಮಾರು 1000ಕ್ಕೂ ಹೆಚ್ಚು ಕ್ರಿಡಾಪಟುಗಳು ಭಾಗವಹಿಸಲಿದ್ದಾರೆ. ವಿಜೇತರಾದವರಿಗೆ ಮೇಡಲ್ಸ್, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವೈಯಕ್ತಿಕ ಸ್ಪರ್ಧೆಯಲ್ಲಿಪ್ರಥಮ, ದ್ವಿತೀಯ ಸ್ಥಾನ, ಗುಂಪು ಸ್ಪರ್ಧೆಯಲ್ಲಿಪ್ರಥಮ ಸ್ಥಾನ ಪಡೆದವರು ಮಾತ್ರ ಮೈಸೂರಿನಲ್ಲಿನಡೆಯಲಿರುವ ದಸರಾ ಸಿ.ಎಂ.ಕಪ್ ಕ್ರೀಡಾಕೂಟದಲ್ಲಿಭಾಗವಹಿಸಲಿರುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೆ.ಎಚ್.ಪಾಟೀಲ, ಕ್ರೀಡಾಂಗಣ, ಗದಗ ದೂ: 08372-238345 ಸಂಪರ್ಕಿಸಬಹುದಾಗಿದೆ.
ವಿಪ ಸದಸ್ಯ ಎಸ್.ವಿ. ಸಂಕನೂರ ಕಾರ್ಯಕ್ರಮ ಉದ್ಘಾಟಿಸುವರು. ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಎಸ್.ಎಸ್. ಪಾಟೀಲ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ , ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಲ್ಲಾಯುವಜನ ಒಕ್ಕೂಟದ ಅಧ್ಯಕ್ಷ ರವಿಕಾಂತ ಅಂಗಡಿ ಆಗಮಿಸುವರು.
ಪಂದ್ಯಾವಳಿ ಸ್ಥಳ:
ಬೆಳಗಾವಿ ವಿಭಾಗ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟದ ಪಂದ್ಯಾವಳಿ ಕೆ.ಎಚ್. ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿ ಹಾಗೂ ಕಳಸಾಪುರ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿಆಯೋಜಿಸಲಾಗಿದೆ.
ಕೆ.ಎಚ್.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿಅಥ್ಲೆಟಿಕ್, ಖೋಖೋ, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್ , ನೆಟ್ ಬಾಲ್ ಹಾಗೂ ಗದಗನ ಕಳಸಾಪೂರ ರಸ್ತೆ ಯ ಒಳಾಂಗಣ ಕ್ರೀಡಾಂಗಣದಲ್ಲಿ ಕಬಡ್ಡಿ , ಟೀಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಮೇಲ್ಕಂಡ ಕ್ರೀಡೆಗಳಲ್ಲಿಬೆಳಗಾವಿ ವಿಭಾಗೀಯ ಜಿಲ್ಲೆಗಳಿಂದ ಸುಮಾರು 1000ಕ್ಕೂ ಹೆಚ್ಚು ಕ್ರಿಡಾಪಟುಗಳು ಭಾಗವಹಿಸಲಿದ್ದಾರೆ. ವಿಜೇತರಾದವರಿಗೆ ಮೇಡಲ್ಸ್, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವೈಯಕ್ತಿಕ ಸ್ಪರ್ಧೆಯಲ್ಲಿಪ್ರಥಮ, ದ್ವಿತೀಯ ಸ್ಥಾನ, ಗುಂಪು ಸ್ಪರ್ಧೆಯಲ್ಲಿಪ್ರಥಮ ಸ್ಥಾನ ಪಡೆದವರು ಮಾತ್ರ ಮೈಸೂರಿನಲ್ಲಿನಡೆಯಲಿರುವ ದಸರಾ ಸಿ.ಎಂ.ಕಪ್ ಕ್ರೀಡಾಕೂಟದಲ್ಲಿಭಾಗವಹಿಸಲಿರುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೆ.ಎಚ್.ಪಾಟೀಲ, ಕ್ರೀಡಾಂಗಣ, ಗದಗ ದೂ: 08372-238345 ಸಂಪರ್ಕಿಸಬಹುದಾಗಿದೆ.