ಆ್ಯಪ್ನಗರ

ಇಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಶಿರಹಟ್ಟಿ : ಶಿರಹಟ್ಟಿ ತಾಲೂಕು 6ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಶ್ರೀ ನಿಂಗರೆಡ್ಡಿ ತಿಮ್ಮರಡ್ಡಿ ತಾರಿಕೊಪ್ಪ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಜರುಗಲಿದೆ.

Vijaya Karnataka 9 Feb 2019, 5:00 am
ಶಿರಹಟ್ಟಿ : ಶಿರಹಟ್ಟಿ ತಾಲೂಕು 6ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಶ್ರೀ ನಿಂಗರೆಡ್ಡಿ ತಿಮ್ಮರಡ್ಡಿ ತಾರಿಕೊಪ್ಪ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಜರುಗಲಿದೆ.
Vijaya Karnataka Web GDG-8SHT1
ಮಾಚೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆಯಲಿರುವ 6ನೆಯ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧ್ದಗೊಳ್ಳುತ್ತಿರುವ ವೇದಿಕೆ.


ಬೆಳಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಶಾಸಕ ರಾಮಣ್ಣ ಲಮಾಣಿ, ಪರಿಷತ್‌ ಧ್ವಜವನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ನೆರವೇರಿಸಲಿದ್ದಾರೆ. 8.30 ಗಂಟೆಗೆ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷ ರ ಮೆರವಣಿಗೆಯನ್ನು ಮಾಜಿ ಜಿಪಂ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ æಯ ಉದ್ಘಾಟಿಸಲಿದ್ದಾರೆ. 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಅಧ್ಯಕ್ಷ ತೆಯನ್ನು ಶಾಸಕ ರಾಮಣ್ಣ ಲಮಾಣಿ, ಸ್ವಾಗತವನ್ನು ತಾಕಸಾಪ ಅಧ್ಯಕ್ಷ ಎಂ.ಕೆ.ಲಮಾಣಿ, ಪ್ರಾಸ್ತಾವಿಕ ನುಡಿಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ:ಶರಣು ಗೋಗೇರಿ, ಉದ್ಘಾಟನೆಯನ್ನು ವಿಧಾನಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೆರವೇರಿಸಲಿದ್ದಾರೆ. ನಿಕಟಪೂರ್ವ ಸರ್ವಾಧ್ಯಕ್ಷ ಸಿ.ಜಿ.ಹಿರೇಮಠ, ಸಮ್ಮೇಳನಾಧ್ಯಕ್ಷ ಕೆ.ಎ.ಬಳಿಗೇರ ಉಪಸ್ಥಿತರಿರಲಿದ್ದಾರೆ.

ಮಧ್ಯಾಹ್ನ 1.30 ಗಂಟೆಗೆ ಒಂದನೆಯ ಗೋಷ್ಠಿ : ಶಿರಹಟ್ಟಿ ತಾಲೂಕಾ ದರ್ಶನ ಹಾಗೂ ಕೃಷಿಗೋಷ್ಠಿ, ಮಧ್ಯಾಹ್ನ 2.30 ಗಂಟೆಗೆ ಎರಡನೇ ಗೋಷ್ಠಿ : ಕವಿತಾ ವಿಹಾರ, ಸಾಯಂಕಾಲ 4.30 ಗಂಟೆಗೆ ಬಹಿರಂಗ ಅಧಿವೇಶನ ನಡೆಯಲಿವೆ. 6.30ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಶಿರಹಟ್ಟಿಯ ಜ.ಫಕೀರ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮಾರೋಪ ನುಡಿಯನ್ನು ಬೆಂಗಳೂರ ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣವರ ನಡೆಸಿ ಕೊಡಲಿದ್ದಾರೆ.

ಗ್ರಾಮದಲ್ಲಿ ಸಕಲ ಸಿದ್ಧತೆ

ತಾಯಿ ಭುವನೇಶ್ವರಿಯ ಜಾತ್ರೆಯನ್ನು ಸಡಗರದಿಂದ ಆಚರಿಸುವುದಕ್ಕಾಗಿ ಮಾಚೇನಹಳ್ಳಿ ಗ್ರಾಮದ ಎಲ್ಲ ಸಮುದಾಯದ ಹಿರಿಯರು ಭಾಗಿಯಾಗಿ ತಮಗೆ ವಹಿಸಿರುವಂತಹ ಜವಾಬ್ದಾರಿಯನ್ನು ತುಂಬಾ ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಸಮ್ಮೇಳನಕ್ಕೆ ಆಗಮಿಸುವಂತಹ ಸಾಹಿತಿಗಳಿಗೆ, ಕನ್ನಡಾಭಿಮಾನಿಗಳಿಗೆ ಎಲ್ಲ ಸೌಲಭ್ಯ ಕಲ್ಪಿಸುವುದಕ್ಕೆ ಸಜ್ಜಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ