ಆ್ಯಪ್ನಗರ

501 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ರೋಣ : ತಾಲೂಕಿನ ಮುಶಿಗೇರಿಯಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ಗುಡ್ಡಾಪುರ ದಾನಮ್ಮದೇವಿ ಪುರಾಣ ಪ್ರವಚನ ಹಿನ್ನೆಲೆಯಲ್ಲಿ ಶನಿವಾರ ಸುಮಾರು 501 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

Vijaya Karnataka 24 Mar 2019, 5:00 am
ರೋಣ : ತಾಲೂಕಿನ ಮುಶಿಗೇರಿಯಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ಗುಡ್ಡಾಪುರ ದಾನಮ್ಮದೇವಿ ಪುರಾಣ ಪ್ರವಚನ ಹಿನ್ನೆಲೆಯಲ್ಲಿ ಶನಿವಾರ ಸುಮಾರು 501 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
Vijaya Karnataka Web GDG-23 RON 1A


ಕಲಾವಿದೆ ಸುಮತಿಶ್ರೀ ನವಲಿಹಿರೇಮಠ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ.ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ನೈತಿಕತೆ ಮೈಗೂಡಿಸಿಕೊಂಡರೆ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ನಾಗರಿಕರ ಅಗತ್ಯವಿದೆ. ಅದರಂತೆ ಮಗು ಬೆಳೆದು ಉತ್ತಮ ನಾಗರಿಕನಾಗಬೇಕಾದರೆ ತಾಯಿಯ ಪಾತ್ರ ಮಹತ್ವವಿದೆ ಎಂದರು.

ಪ್ರವಚನಕಾರ ಶಿವಲಿಂಗಶಾಸ್ತ್ರಿ ಮಾತನಾಡಿ, ಭಾರತದಲ್ಲಿರುವಷ್ಟು ಮಹಿಳಾ ಪ್ರಧಾನ(ದೇವತೆಗಳ) ದೇವಾಲಯಗಳು ವಿಶ್ವದ ಯಾವುದೇ ರಾಷ್ಟ್ರಗಳಲ್ಲಿಲ್ಲ ಎಂದರು.

ಮಂಜುಳಾ ರೇವಡಿ ಮಾತನಾಡಿ, ಪುರುಷನ ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಮಹಿಳೆ ಇರುತಾಳೆ ಎಂಬ ಮಾತೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕೆಲಸದಲ್ಲೂ ಮಹಿಳೆ ಮುಂದಿರುವುದು ಸಂತಸದ ಸಂಗತಿ ಎಂದರು

ಗೌರಾದೇವಿ ಶಾಬಾದಿಮಠ, ವಿಜಯಲಕ್ಷ್ಮೀ ವಸ್ತ್ರದ, ಶರಣಮ್ಮ ಅಂಗಡಿ, ಲಲಿತಾ ಮುರಗೋಡ, ಸುಪ್ರೀಯಾ ಅಕ್ಕಸಾಲಿಗರ, ಶಿವರುದ್ರಯ್ಯ ಗೌಡಗಾಂವ, ಸಿದ್ದಶಕುಮಾರ ಸಿಂದೋಗಿ, ಮೌನೇಶ ಅಕ್ಕಸಾಲಿಗರ, ಉಪ್ಪಾರ, ರಾಜು ಮಾಲಗಿತ್ತಿ, ಬಸವರಾಜ, ಬೇವಿನಮರದ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ