ಆ್ಯಪ್ನಗರ

ವಿಡಿಎಸ್‌ ಕ್ಲಾಸಿಕ್‌ ಪ್ರಾಥಮಿಕ ಶಾಲೆ: ವನಮಹೋತ್ಸವ

ಗದಗ: ನಗರದ ವಿದ್ಯಾದಾನ ಸಮಿತಿ ಕ್ಲಾಸಿಕ್‌ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಅವರು ಶಾಲಾ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಸಸಿಗಳು ಇದ್ದ ಹಾಗೆ,

Vijaya Karnataka 11 Jul 2019, 5:00 am
ಗದಗ: ನಗರದ ವಿದ್ಯಾದಾನ ಸಮಿತಿ ಕ್ಲಾಸಿಕ್‌ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಅವರು ಶಾಲಾ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಸಸಿಗಳು ಇದ್ದ ಹಾಗೆ, ಒಂದು ಮಗು-ಒಂದು ಸಸಿಗೆ ಸಮಾನ, ಒಂದು ಗಿಡವನ್ನು ಹಾಳು ಮಾಡಿದರೆ ಒಂದು ಮಗುವನ್ನು ಹಾಳು ಮಾಡಿದ ಹಾಗೆ ನಾವು ಒಂದು ಸಸಿಗೆ ಒಂದು ವರ್ಷ ಆಶ್ರಯ ಕೊಟ್ಟರೆ, ಅದು ನಮಗೆ ನೂರು ವರ್ಷ ಆಶ್ರಯ ನೀಡುತ್ತದೆ. ಹಾಗಾಗಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಪರಿಸರದ ಜೊತೆಗೆ ಉತ್ತಮವಾದ ಪರಿಸರವನ್ನು ಬೆಳೆಸಿಕೊಳ್ಳುವ ಮನೋಭಾವನೆಯನ್ನು ಶಿಕ್ಷ ಕರು ಮಾರ್ಗದರ್ಶನ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ, ಶಿಕ್ಷ ಕರಿಗೆ ಕರೆ ನೀಡಿದರು.
Vijaya Karnataka Web GDG-10RUDRAGOUD6
ಗದಗನ ವಿದ್ಯಾದಾನ ಸಮಿತಿ ಕ್ಲಾಸಿಕ್‌ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನಡೆಯಲಾಯಿತು.


ಪ್ರಾಚಾರ್ಯ ಎಸ್‌.ಸಿ.ಹೆದ್ದೂರಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷ ಣೆ ಬಗ್ಗೆ ಹೆಚ್ಚಿನ ಕಾಳಜಿ ಹೊಂದಬೇಕು. ವಿದ್ಯಾರ್ಥಿ ದಿಶೆಯಲ್ಲಿ ಪರಿಸರ ಜಾಗೃತಿ ಬಗ್ಗೆ ಪಾಲಕರಿಗೆ ಮತ್ತು ಮಕ್ಕಳಿಗೆ ತಿಳಿಸಬೇಕು ಎಂದರು.

ಶ್ರೀಪಾದ ಜೋಶಿ, ಎಂ.ಬಿ.ಹುಯಿಲಗೋಳ, ಜಿ.ಎ.ಪವಾರ, ಬಿ.ಎಸ್‌.ರಾಠೋಡ, ಎಂ.ಆರ್‌. ಡೊಳ್ಳಿನ, ಶಿಕ್ಷ ಕ ವೃಂದವು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ