ಆ್ಯಪ್ನಗರ

ಎಪಿಎಂಸಿ ಕಾಮಗಾರಿಯ ಪರಿಶೀಲನೆ

ಮುಂಡರಗಿ: ಇಲ್ಲಿಯ ಎಪಿಎಂಸಿಯಲ್ಲಿ99.99 ಲಕ್ಷ ರೂ.ವೆಚ್ಚದಲ್ಲಿನಡೆಯುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 10 Sep 2019, 5:00 am
ಮುಂಡರಗಿ: ಇಲ್ಲಿಯ ಎಪಿಎಂಸಿಯಲ್ಲಿ99.99 ಲಕ್ಷ ರೂ.ವೆಚ್ಚದಲ್ಲಿನಡೆಯುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web 43287MDR2 APMC MLA_25
ಮುಂಡರಗಿ ಎಪಿಎಂಸಿಯಲ್ಲಿನಡೆಯುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಸ್ಥಳಕ್ಕೆ ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ ಭೇಟಿ ನೀಡಿ ಪರಿಶೀಲಿಸಿದರು.


ಕಾಮಗಾರಿ ನಡೆದ ಸ್ಥಳದಲ್ಲಿದ್ದ ಮಣ್ಣು ಮಿಶ್ರಿತ ಮರಳು ಮತ್ತು ಕಡಿ ವೀಕ್ಷಿಸಿದ ಶಾಸಕ ಕಳಕಪ್ಪ ಬಂಡಿ ಅವರು, ಮಣ್ಣು ಮಿಶ್ರಿತ ಮರಳು ಒಳಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಮರಳಿನ ಗುಣಮಟ್ಟ ಪರೀಕ್ಷೆ ನಡೆಸುವಂತೆ ತಹಸೀಲ್ದಾರ್‌ ಡಾ.ವೆಂಕಟೇಶ ನಾಯಕ ಅವರಿಗೆ ಸೂಚಿಸಿದರು.

ಎಪಿಎಂಸಿ ಕಾರ್ಯದರ್ಶಿ ಎನ್‌.ಎಚ್‌.ಈಶ್ವರಾಚಾರ್ಯ ಮತ್ತು ಎಪಿಎಂಸಿ ಎಇಇ ಚಂದ್ರಶೇಖರಪ್ಪ ಅವರಿಗೆ ದೂರವಾಣಿ ಮೂಲಕ ಸಧ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಿ ಎಂದು ಸೂಚಿಸಿದರು.

ಎಪಿಎಂಸಿ ಸದಸ್ಯ ರವೀಂದ್ರ ಉಪ್ಪಿನಬೆಟಗೇರಿ, ದೇವಪ್ಪ ಕಂಬಳಿ, ಕರಬಸಪ್ಪ ಹಂಚಿನಾಳ, ಹೇಮಗಿರೀಶ ಹಾವಿನಾಳ, ಎಸ್‌.ವಿ.ಪಾಟೀಲ, ಅಂದಪ್ಪ ಉಳ್ಳಾಗಡ್ಡಿ, ಪ್ರಶಾಂತ ಗುಡದಪ್ಪನವರ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ