ಆ್ಯಪ್ನಗರ

ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ

ಗದಗ: ಭಾರತ ಚುನಾವಣೆ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯನ್ನು ನ.18ರ ವರೆಗೆ ವಿಸ್ತರಿಸಿದ್ದು ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲ್ಯಾಬಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಸರಣೆ ವೀಕ್ಷಕ ಡಾ.ಎಸ್‌.ಸೆಲ್ವಕುಮಾರ ಸೂಚಿಸಿದರು.

Vijaya Karnataka 17 Oct 2019, 5:00 am
ಗದಗ: ಭಾರತ ಚುನಾವಣೆ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯನ್ನು ನ.18ರ ವರೆಗೆ ವಿಸ್ತರಿಸಿದ್ದು ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲ್ಯಾಬಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಸರಣೆ ವೀಕ್ಷಕ ಡಾ.ಎಸ್‌.ಸೆಲ್ವಕುಮಾರ ಸೂಚಿಸಿದರು.
Vijaya Karnataka Web voter list revision period extension
ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ


ಜಿಲ್ಲಾಡಳಿತ ಭವನದಲ್ಲಿನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇವಿಪಿ ತಂತ್ರಾಂಶದಲ್ಲಿ ಮತದಾರರ ಪರಿಶೀಲನಾ ಕಾರ್ಯಕ್ರಮದಡಿ ಜಿಲ್ಲೆಯ ಪ್ರಗತಿ ನಿಧಾನವಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿತಮ್ಮ ವೈಯಕ್ತಿಕ ವಿವರಗಳನ್ನು ಪರಿಶೀಲಿಸಿಕೊಳ್ಳಲು ಹಾಗೂ 1-1-2020 ಕ್ಕೆ 18 ವರ್ಷ ಪೂರ್ಣಗೊಳ್ಳುವ ಹೊಸ ಮತದಾರರ ಹೆಸರು ಸೇರ್ಪಡೆಗೆ ಅಗತ್ಯದ ಕ್ರಮ ಜರುಗಿಸಲು ಸೂಚಿಸಿದರು. ಹೊಸ ಯುವ ಮತದಾರರ ಸೇರ್ಪಡೆ ಕುರಿತು ಕಾಲೇಜು ವಿಧ್ಯಾರ್ಥಿಗಳಲ್ಲಿಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಲು ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಮತದಾರರ ಸಂಕ್ಷಿಪ್ತ ಪರಿಶೀಲನೆಗೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರಲ್ಲಿಜಾಗೃತಿ ಮೂಡಿಸಲು ಅಗತ್ಯದ ಪ್ರಚಾರ ಕಾರ್ಯಕ್ರಮವನ್ನು ಕೈಗೊಂಡು ಪ್ರಗತಿ ಸಾಧಿಸಲಾಗುತ್ತಿದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್‌.ಮಂಜುನಾಥ, ಜಿಲ್ಲಾಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ದಿನೇಶ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ತಹಸೀಲ್ದಾರರು, ಪಪಂ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ