ಆ್ಯಪ್ನಗರ

ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ

ಗದಗ: ಮಳೆಯ ಆರ್ಭಟ ಜಿಲ್ಲೆಯಲ್ಲಿಮತ್ತೆ ಮುಂದುವರಿದಿದ್ದು, ಶನಿವಾರ ತಡರಾತ್ರಿ ಗದಗ -ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶನಿವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ನಿರಂತರವಾಗಿ ಸುರಿಯಿತು. ಜಿಲ್ಲೆಯ ನರಗುಂದ, ಮುಳಗುಂದ, ಡಂಬಳ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಭಾಗದಲ್ಲಿಅಲ್ಲಲ್ಲಿಮಳೆಯಾಗಿದೆ.

Vijaya Karnataka 21 Oct 2019, 5:00 am
ಗದಗ: ಮಳೆಯ ಆರ್ಭಟ ಜಿಲ್ಲೆಯಲ್ಲಿಮತ್ತೆ ಮುಂದುವರಿದಿದ್ದು, ಶನಿವಾರ ತಡರಾತ್ರಿ ಗದಗ -ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ.
Vijaya Karnataka Web 20SALIM13_25
ಗದಗ ನಗರದ ಗಂಗಿಮಡಿ ಪ್ರದೇಶದಲ್ಲಿಮಳೆಯಿಂದ ರಸ್ತೆ ಹೊಂಡವಾಗಿ ಮಾರ್ಪಟ್ಟಿರುವುದು.

ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶನಿವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ನಿರಂತರವಾಗಿ ಸುರಿಯಿತು. ಜಿಲ್ಲೆಯ ನರಗುಂದ, ಮುಳಗುಂದ, ಡಂಬಳ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಭಾಗದಲ್ಲಿಅಲ್ಲಲ್ಲಿಮಳೆಯಾಗಿದೆ.

ಗದಗ -ಬೆಟಗೇರಿ ಅವಳಿ ನಗರದಲ್ಲಿಸುರಿದ ಮಳೆಯಿಂದ ತಗ್ಗು ಪ್ರದೇಶದ ಅನೇಕ ಬಡಾವಣೆಗಳು ಜಲಾವೃತವಾಗಿದ್ದವು. ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಜಿಲ್ಲಾಡಳಿತ ಭವನದ ಕೂಗಳತೆ ದೂರದಲ್ಲಿರುವ ಗಂಗಿಮಡಿ ಜನತಾ ಕಾಲನಿಯಲ್ಲಿ50ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿತ್ತು.

ಗಂಗಿಮಡಿ ಆಶ್ರಯ ಕಾಲೊನಿಯ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಗೃಹೋಪಯೋಗಿ ವಸ್ತುಗಳೂ ಸೇರಿದಂತೆ, ಧವಸ ಧಾನ್ಯಗಳು ನೀರುಪಾಲಾಗಿವೆ. ಬಡಾವಣೆಯ ಎಲ್ಲರಸ್ತೆಗಳು ಕೆರೆಯಾಗಿ ಮಾರ್ಪಟ್ಟಿವೆ.

ಇನ್ನು ನಗರದ ಡಿಸಿ ಮಿಲ್‌ ಬಳಿಯ ರಾಜಕಾಲುವೆ ಅಪಾಯ ಮಟ್ಟ ಮೀರಿ ಹರಿದ ಪರಿಣಾಮ ಸುತ್ತಮುತ್ತಲ ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕಾಲುವೆಯ ಮತ್ತೊಂದು ಬದಿಯಲ್ಲಿರುವ ಐವತ್ತಕ್ಕೂ ಹೆಚ್ಚು ಗುಡಿಸಲು ವಾಸಿಗಳು ನೀರು ನುಗ್ಗುವ ಭಯದಲ್ಲೆಜೀವನ ನಡೆಸುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ