ಆ್ಯಪ್ನಗರ

ನಾಳೆ ಗದಗನಲ್ಲಿ ಮತ್ತೆ ಕಲ್ಯಾಣ

ಗದಗ : 12ನೇ ಶತಮಾನದ ಕಲ್ಯಾಣ ಕ್ರಾಂತಿ ಗುರಿ ತಲುಪಲು ಈವರೆಗೂ ಸಾಧ್ಯವಾಗಿಲ್ಲ. ಬಸವಣ್ಣನವರು ಕಂಡ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮತ್ತೊಮ್ಮೆ ತರುವ ಪ್ರಯತ್ನವಾಗಿ ಮತ್ತೆ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಾಜಿ ಶಾಸಕ ಡಿ.ಆರ್‌. ಪಾಟೀಲ ಹೇಳಿದರು.

Vijaya Karnataka 19 Aug 2019, 5:00 am
ಗದಗ : 12ನೇ ಶತಮಾನದ ಕಲ್ಯಾಣ ಕ್ರಾಂತಿ ಗುರಿ ತಲುಪಲು ಈವರೆಗೂ ಸಾಧ್ಯವಾಗಿಲ್ಲ. ಬಸವಣ್ಣನವರು ಕಂಡ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮತ್ತೊಮ್ಮೆ ತರುವ ಪ್ರಯತ್ನವಾಗಿ ಮತ್ತೆ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಾಜಿ ಶಾಸಕ ಡಿ.ಆರ್‌. ಪಾಟೀಲ ಹೇಳಿದರು.
Vijaya Karnataka Web GDG-18SALIM12
ಗದಗ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿದರು.


ಭಾನುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಪರಿಕಲ್ಪನೆ ಯಶಸ್ವಿಯಾಗಬೇಕಾದರೆ ಮೊದಲು ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕು. ಅವಕಾಶ ಪಡೆದವರಲ್ಲಿ ಇತರರೊಂದಿಗೆ ಸ್ಪರ್ಧೆ ಮಾಡಲು ಶಕ್ತನಾಗಿದ್ದೇನೆ ಎನ್ನುವ ಭಾವನೆ ಮೂಡಿದಾಗ ಯಾರೂ ಮೀಸಲಾತಿ ಬೇಕು ಎಂದು ಅಪೇಕ್ಷೆ ಪಡುವುದಿಲ್ಲ. ಎಲ್ಲರಿಗೂ ಅವಕಾಶ ಸಿಗುವ ವರೆಗೂ ಮೀಸಲಾತಿ ಅಗತ್ಯವಾಗಿದೆ. ಸಮಾನ ಅವಕಾಶಗಳೂ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಆ. 20ರಂದು ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಸಹಮತ ವೇದಿಕೆ ಆಶ್ರಯದಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗಿದೆ. ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ತೋಂಟದ ಸಿದ್ಧರಾಮ ಸ್ವಾಮೀಜಿ ಹಾಗೂ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿವೆ ಎಂದರು.

ಆ. 20ರಂದು ಬೆಳಗ್ಗೆ 11 ಕ್ಕೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಯಲಿದೆ. ಅಣ್ಣಿಗೇರಿಯ ಎಸ್‌.ಎಸ್‌. ಹರ್ಲಾಪುರ ಮತ್ತು ಪ್ರೊ. ಶಶಿಧರ ತೋಡಕರ ಸಂವಾದದಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಸರ್ವ ಧರ್ಮಗಳ ಜನರೊಂದಿಗೆ ಸಾಮರಸ್ಯ ನಡಿಗೆ ಕಾರ್ಯಕ್ರಮ ನಗರದ ಭೀಷ್ಮ ಕೆರೆ ಆವರಣದಿಂದ ಕಲ್ಯಾಣ ಕೇಂದ್ರದ ವರೆಗೆ ನಡೆಯಲಿದೆ ಎಂದರು.

ಸಂಜೆ 5ಕ್ಕೆ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಕಲ್ಯಾಣ ಮತ್ತು ಬಹುಜನ ವಿಷಯವಾಗಿ ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯಕ, ವಚನ ಚಳವಳಿ - ಮಹಿಳಾ ವಿಮೋಚನೆ ವಿಷಯವಾಗಿ ಬೆಂಗಳೂರಿನ ಡಾ.ಲೀಲಾ ಸಂಪಿಗೆ ಉಪನ್ಯಾಸ ನೀಡುವರು. ಸಾಣೇಹಳ್ಳಿ ತಂಡದವರಿಂದ ವಚನಗೀತೆ, ಮೋಳಿಗೆ ಮಾರಯ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಕಾರ್ಯಕಾರಿ ಸಮಿತಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ವಿವೇಕಾನಂದಗೌಡ ಪಾಟೀಲ, ಎಂ.ಸಿ.ಐಲಿ, ಶೇಕಣ್ಣ ಕವಳಿಕಾಯಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ