ಆ್ಯಪ್ನಗರ

ಅಕ್ರಮ ಸಾರಾಯಿ ರಸ್ತೆಗೆಸೆದು ಬೆಂಕಿ ಹಚ್ಚಿದ ಮಹಿಳೆಯರು

ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

Vijaya Karnataka Web 21 Mar 2018, 11:12 am
ಗದಗ: ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
Vijaya Karnataka Web women protest against illegal liquor
ಅಕ್ರಮ ಸಾರಾಯಿ ರಸ್ತೆಗೆಸೆದು ಬೆಂಕಿ ಹಚ್ಚಿದ ಮಹಿಳೆಯರು


ಅಕ್ರಮ ಸಾರಾಯಿ ತುಂಬಿದ್ದ ವಾಹನ ತಡೆದ ಮಹಿಳೆಯರು ಸಾರಾಯಿ ಬಾಟಲಿಗಳನ್ನು ರಸ್ತೆಗೆ ಚೆಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಠಾಣೆ ಪಕ್ಕದಲ್ಲೇ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ಕಿಡಿ ಕಾರಿದ್ದು, ವಾಹನದ ಗಾಜನ್ನು ಪುಡಿಗೈದಿದ್ದಾರೆ.

ಮಹಿಳೆಯರ ಆಕ್ರೋಶ ನೋಡಿ ಆತಂಕಗೊಂಡ ವಾಹನ ಚಾಲಕ ಪೊಲೀಸ್ ಠಾಣೆಗೆ ಓಡಿಹೋಗಿ ರಕ್ಷಣೆ ಪಡೆದುಕೊಂಡಿದ್ದಾರೆ. ವಾಹನದ ಚಾಲಕ ಮತ್ತು ಪೊಲೀಸ್‌ ಪೇದೆಯನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡರು.

ಅಕ್ರಮ ಸಾರಾಯಿ ದಂಧೆ ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೊಲೀಸರ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ