ಆ್ಯಪ್ನಗರ

ಯಡಿಯೂರಪ್ಪ,ಕತ್ತಿ ಹೇಳಿಕೆಗೆ ವಿರೋಧ

ಲಕ್ಷ್ಮೇಶ್ವರ: ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ಶಾಸಕ ಉಮೇಶ ಕತ್ತಿ ಅವರ ಹೇಳಿಕೆ ಖಂಡಿನೀಯ ಅವರು ನೀಡಿದ ಹೇಳಿಕೆ ವಾಪಸ್‌ ಪಡೆಯದಿದ್ದರೆ ಹೋರಾಟ ಮಾಡುವುದಾಗಿ ಎಂದು ಜೆಡಿಎಸ್‌ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ವಿಜಯಕುಮಾರ ಆಲೂರ ಹೇಳಿದರು.

Vijaya Karnataka 19 Oct 2019, 5:00 am
ಲಕ್ಷ್ಮೇಶ್ವರ: ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ಶಾಸಕ ಉಮೇಶ ಕತ್ತಿ ಅವರ ಹೇಳಿಕೆ ಖಂಡಿನೀಯ ಅವರು ನೀಡಿದ ಹೇಳಿಕೆ ವಾಪಸ್‌ ಪಡೆಯದಿದ್ದರೆ ಹೋರಾಟ ಮಾಡುವುದಾಗಿ ಎಂದು ಜೆಡಿಎಸ್‌ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ವಿಜಯಕುಮಾರ ಆಲೂರ ಹೇಳಿದರು.
Vijaya Karnataka Web yeddyurappa opposition to sword statement
ಯಡಿಯೂರಪ್ಪ,ಕತ್ತಿ ಹೇಳಿಕೆಗೆ ವಿರೋಧ


ಅವರು ಪತ್ರಿಕಾ ಹೇಳಿಕೆ ನೀಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿಪದೇ ಪದೇ ಬೆಳಗಾವಿ ವಿಷಯದಲ್ಲಿಖ್ಯಾತೆ ತೆಗೆಯುವ ಮತ್ತು ಕಳಸಾ ಬಂಡೂರಿ ಯೋಜನೆಯ ಒಮ್ಮತ ಸೂಚಿಸದ ಮಹಾರಾಷ್ಟ್ರಕ್ಕೆ ಆಲಮಟ್ಟಿ ಜಲಾಶಯದಿಂದ ನೀರು ಬಿಡುವುದಾಗಿ ಹೇಳಿರುವುದರಿಂದ ಆ ಭಾಗದ ರೈತರಿಗೆ ಜಲಾಶಯದ ಮೇಲೆ ಅವಲಂಬಿತರಾದ ಕೃಷಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಶಾಸಕ ಉಮೆಶ ಕತ್ತಿಯವರು ತಮ್ಮ ಕ್ಷೇತ್ರದ ಖಾಸಗಿ ಕಾರ್ಯಕ್ರಮದಲ್ಲಿಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ವಿಚಾರವೆತ್ತಿ ಒಗ್ಗಟ್ಟಿಗೆ ಹೆಸರುವಾಸಿಯಾದ ಕರ್ನಾಟಕ ಒಡೆದು ಆಳುವ ಪ್ರಯತ್ನಿಸುತ್ತಿದ್ದಾರೆ. ಇಂತಹ ಹೇಳಿಕೆ ನೀಡಿರುವ ಸಿಎಂ ಹಾಗೂ ಶಾಸಕ ಕತ್ತಿ ಹೇಳಿಕೆ ಹಿಂಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ