ಆ್ಯಪ್ನಗರ

ಯಂಗ ಇಂಡಿಯಾ ಪರಿವಾರ ಕಾರ‍್ಯ ಶ್ಲಾಘನೀಯ

ಗದಗ : ವಿದ್ಯಾರ್ಥಿಗಳು ಸಮಾಜದಲ್ಲಿ ಸಿಗುವ ಸೌಲಭ್ಯ ಬಳಸಿಕೊಂಡು ಉತ್ತಮ ಶಿಕ್ಷ ಣ ಪಡೆಯುವ ಜತೆಗೆ ಪ್ರಾಮಾಣಿಕತೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ರವಿ ಗುಂಜೀಕರ ಹೇಳಿದರು.

Vijaya Karnataka 9 Jul 2019, 5:00 am
ಗದಗ : ವಿದ್ಯಾರ್ಥಿಗಳು ಸಮಾಜದಲ್ಲಿ ಸಿಗುವ ಸೌಲಭ್ಯ ಬಳಸಿಕೊಂಡು ಉತ್ತಮ ಶಿಕ್ಷ ಣ ಪಡೆಯುವ ಜತೆಗೆ ಪ್ರಾಮಾಣಿಕತೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ರವಿ ಗುಂಜೀಕರ ಹೇಳಿದರು.
Vijaya Karnataka Web young india undergraduate is commendable
ಯಂಗ ಇಂಡಿಯಾ ಪರಿವಾರ ಕಾರ‍್ಯ ಶ್ಲಾಘನೀಯ


ನಗರದ ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಯಂಗ ಇಂಡಿಯಾ ಪರಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ನೋಟಬುಕ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರನ್ನು ಗೌರವಿಸುವುದು, ವಿದ್ಯಾರ್ಥಿಗಳಿಗೆ ನೋಟಬುಕ್‌ ಸೇರಿದಂತೆ ಆರ್ಥಿಕ ನೆರವು ನೀಡುವುದು, ಯುವ ಪದವೀಧರರಿಗೆ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗ ಕಲ್ಪಿಸುವುದೂ ಸೇರಿದಂತೆ ಸಮಾಜದಲ್ಲಿನ ಎಲ್ಲ ಜಾತಿ ಜನಾಂಗದವರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಯಂಗ ಇಂಡಿಯಾ ಪರಿವಾರ ಮುಂಚೂಣಿಯಲ್ಲಿದೆ. ಈ ಕಾರ್ಯದಲ್ಲಿ ಯಂಗ ಇಂಡಿಯಾ ಪರಿವಾರದ ಸಂಸ್ಥಾಪಕ ಅಧ್ಯಕ್ಷ ವೆಂಕನಗೌಡ ಹಾಗೂ ಅವರ ಪರಿವಾರದವರ ಶ್ರಮ ಅತ್ಯಂತ ಸ್ತುತ್ಯಾರ್ಹವಾಗಿದೆ ಎಂದು ಹೇಳಿದರು.

ಪ್ರಶಸ್ತಿ ಪುರಸ್ಕೃತ ಶಿಕ್ಷ ಕರು, ದಸಂಸ ಜಿಲ್ಲಾಧ್ಯಕ್ಷ ಎಸ್‌.ಎನ್‌.ಬಳ್ಳಾರಿ ಮಾತನಾಡಿ, ಶೈಕ್ಷ ಣಿಕ ಸಾಧನೆ ಮಾಡಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ವಿದ್ಯಾರ್ಥಿಗಳು ಉತ್ತಮ ಶಿಕ್ಷ ಣ ಪಡೆದು ಸಮಾಜ ಹಾಗೂ ಸರಕಾರದಲ್ಲಿ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವೆಂಕನಗೌಡ ಗೋವಿಂದಗೌಡ್ರ ಕಳೆದ ಎರಡು ದಶಕಗಳಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್‌ ವಿತರಿಸುವ ಜತೆಗೆ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಶಿಕ್ಷ ಣ ಇಲಾಖೆ ಅಧಿಕಾರಿ ಶರಣು ಗೋಗೇರಿ ಮಾತನಾಡಿ, ಸಂಘಟನೆ ಮೂಲಕ ಬಡವರಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿರುವುದನ್ನು ಶ್ಲಾಘಿಸಿದರು.

ಅಧ್ಯಕ್ಷ ತೆ ವಹಿಸಿದ್ದ ಯಂಗ ಇಂಡಿಯಾ ಪರಿವಾರದ ಸಂಸ್ಥಾಪಕ ಅಧ್ಯಕ್ಷ ವೆಂಕನಗೌಡ ಗೋವಿಂದಗೌಡ್ರ ಮಾತನಾಡಿ, ಮಕ್ಕಳನ್ನು ಸ್ವಾಭಿಮಾನಿ, ಸ್ವಾವಲಂಬಿಯಾಗಿ ಜೀವನ ನಡೆಸುವಂತೆ ಬೆಳೆಸಿ ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸಬೇಕು ಎಂದರು.

ಐದನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಐದು ಸಾವಿರಕ್ಕೂ ಅಧಿಕ ನೋಟಬುಕ್‌ ವಿತರಿಸಲಾಯಿತು. ದತ್ತು ಪ್ರಶಸ್ತಿ ಪುರಸ್ಕೃತ ಮಂಗಳಗೌರಿ ಹಿರೇಮಠ, ಪ್ರಶಸ್ತಿ ಪುರಸ್ಕೃತ ಪತ್ರಕರ್ತರು, ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.

ಶಾರದಾ ಹಿರೇಮಠ, ವಿಜಯಲಕ್ಷ್ಮೀ ಮಾನ್ವಿ, ರವಿ ಕರಿಬಸಣ್ಣನವರ, ಸುರೇಶ ಹಾದಿಮನಿ, ವೈಭವ ಬದಿ, ಮಲಿಕ ಹರ್ಲಾಪೂರ ಇದ್ದರು.

ನೇತ್ರಾ ಸಾಹುಕಾರ ಸ್ವಾಗತಿಸಿದರು. ವೈಶಾಲಿ ಕುಲಕರ್ಣಿ ಸ್ವಾಗತಿಸಿದರು. ಶ್ರೀನಿವಾಸ ಕುಲಕರ್ಣಿ ನಿರೂಪಿಸಿದರು. ಅನಿತಾ ಅಂಗಡಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ