ಆ್ಯಪ್ನಗರ

ಯುವ ಮತದಾರರ ನೋಂದಣಿ ಸ್ವೀಪ್‌ ಸಮಿತಿ ಸಭೆ

ಗದಗ : ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ 18 ವರ್ಷ ಪೂರ್ಣಗೊಂಡ ವಿದ್ಯಾರ್ಥಿಯು ಮತದಾರರ ಯಾದಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಆಯಾ ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.

Vijaya Karnataka 4 Jan 2019, 5:00 am
ಗದಗ : ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ 18 ವರ್ಷ ಪೂರ್ಣಗೊಂಡ ವಿದ್ಯಾರ್ಥಿಯು ಮತದಾರರ ಯಾದಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಆಯಾ ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.
Vijaya Karnataka Web youth voter registration sweepstakes committee meeting
ಯುವ ಮತದಾರರ ನೋಂದಣಿ ಸ್ವೀಪ್‌ ಸಮಿತಿ ಸಭೆ


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವೀಪ್‌ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಯುವ ಮತದಾರರಿಗಾಗಿ ಈಗಾಗಲೇ ಒಂದು ಸುತ್ತಿನ ಸ್ಪರ್ಧಾ ಚಟುವಟಿಕೆ ಪೂರ್ಣಗೊಂಡಿದ್ದು, ಎರಡನೇ ಸುತ್ತಿನ ಸ್ಪರ್ಧಾ ಚಟುವಟಿಕೆಗಳನ್ನು ಜ.8 ಮತ್ತು 9 ರಂದು ಜಿಲ್ಲೆಯ ಎಲ್ಲ ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಪ್ರಬಂಧ, ರಸಪ್ರಶ್ನೆ, ಭಾಷಣ ಸ್ಪರ್ಧೆ ಆಯೋಜಿಸಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಯುವ ಮತದಾರರ ಜಾಗೃತಿ ಕಾರ‍್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದರು. ಸುಮಾರು 80,000 ವಿದ್ಯಾರ್ಥಿಗಳು ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನæೂೕಂದಾಯಿಸಲು ಸರ್ವ ಕ್ರಮ ಜರುಗಿಸಲು ತಿಳಿಸಿದರು.

ಜ.25 ರಂದು ನಡæಯುವ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಅಂದು ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಬೆಳಗ್ಗೆ 11ಕ್ಕೆ ಪ್ರತಿಜ್ಞಾ ವಿಧಿ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸುವ ಮೂಲಕ ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ‍್ಯಕ್ರಮ ಆಚರಿಸಲು ಸೂಚಿಸಿದೆ. 18 ರಿಂದ 19 ವಯೋಮಾನದ ವಿದ್ಯಾರ್ಥಿಗಳು ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡದೇ ಇರುವುದನ್ನು ಗಮನಿಸಿ ಅವರಿಂದ ನಮೂನೆ 6 ರಲ್ಲಿ ಅರ್ಜಿ ಸಂಗ್ರಹಿಸುವ ಕಾರ‍್ಯ ಪ್ರಾರಂಭಿಸಲು ಜ. 7 ರಿಂದ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಕ್ರಮ ಜರುಗಿಸಲು ಹೇಳಿದರು.

ಜಿಪಂ ಸ್ವೀಪ್‌ ಸಮಿತಿ ಸದಸ್ಯ ಕಾರ‍್ಯದರ್ಶಿ ಟಿ. ದಿನೇಶ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಬಿ. ವಿಶ್ವನಾಥ, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕ ಜಿ.ಎಲ್‌. ಬಾರಾಟಕ್ಕೆ, ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಚಾರ‍್ಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ