ಆ್ಯಪ್ನಗರ

Loan Waiver: ಕೆಲವೇ ದಿನಗಳಲ್ಲಿ 10 ಸಾವಿರ ಕೋಟಿ ರೂ. ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ

ಮಾರ್ಚ್‌ ಅಂತ್ಯದೊಳಗೆ ಸುಮಾರು 10 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಗುರಿ ಹೊಂದಿದ್ದು, ಇದರಲ್ಲಿ ಈಗಾಗಲೇ 4,130 ಕೋಟಿ ರೂ. ಬಿಡುಗಡೆ ಆಗಿದೆ ಎಂದು ಸಿಎಂ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Vijaya Karnataka 27 Feb 2019, 10:16 am
ಸಕಲೇಶಪುರ: ಸರಕಾರ ಅನ್ನದಾತನ ಪರವಾಗಿದ್ದು, ರೈತರು ಆತಂಕಕ್ಕೊಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಮನವಿ ಮಾಡಿದರು.
Vijaya Karnataka Web HDK


ಸಿಎಂ ಕುಮಾರಸ್ವಾಮಿ ಅವರು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಂಗಳವಾರ ನಡೆದ ಎತ್ತಿನಹೊಳೆ ಯೋಜನೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

'ತಲೆ ತಲಾಂತರದಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ. ಮಾರ್ಚ್‌ ಅಂತ್ಯದೊಳಗೆ ಸುಮಾರು ಹತ್ತು ಸಾವಿರ ಕೋಟಿ ಸಾಲ ಮನ್ನಾ ಮಾಡುವ ಗುರಿ ಹೊಂದಿದೆ. ಇದರಲ್ಲಿ ಈಗಾಗಲೇ ಸುಮಾರು 4,130 ಕೋಟಿ ರೂ. ಬಿಡುಗಡೆಯಾಗಿದೆ. ಇದು 6.40 ಲಕ್ಷ ಕುಟುಂಬಗಳಿಗೆ ಸಂದಾಯ ಆಗಿದೆ' ಎಂದು ಕುಮಾರಸ್ವಾಮಿ ತಿಳಿಸಿದರು.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಮಾತನಾಡಿ, 'ರೈತರ ಮನೆಯ ರಾಜ್ಯ ಸರಕಾರದಿಂದ ರೈತರಿಗೆ ಯಾವುದೆ ಅನ್ಯಾಯ ಆಗುವುದಿಲ್ಲ ಎಂಬ ವಿಶ್ವಾಸ ಇದೆ. ಯಾರೂ ಹೆದರುವ ಅಗತ್ಯ ಇಲ್ಲ. ಗ್ರಾಮೀಣ ರಸ್ತೆಗಳು, ಕುಡಿಯುವ ನೀರು ಇನ್ನಿತರೆ ಅವಶ್ಯಕತೆಗಳಿದ್ದರೆ ಮನವಿ ಸಲ್ಲಿಸಲಾಗುವುದು' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ