ಆ್ಯಪ್ನಗರ

3 ದಳ, 11ರಲ್ಲಿ ಕಾಂಗ್ರೆಸ್‌ಗೆ ಗೆಲುವು: ಸಿಎಂ

''2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಸೇರಿ ಉಳಿದ ಮೂರು ಕಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಜತೆಗೆ 11 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳೂ ಗೆಲ್ಲುತ್ತಾರೆ,'' ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 24 Apr 2019, 5:00 am
ಹಾಸನ: ''2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಸೇರಿ ಉಳಿದ ಮೂರು ಕಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಜತೆಗೆ 11 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳೂ ಗೆಲ್ಲುತ್ತಾರೆ,'' ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web 3 jds 11 congress win cm
3 ದಳ, 11ರಲ್ಲಿ ಕಾಂಗ್ರೆಸ್‌ಗೆ ಗೆಲುವು: ಸಿಎಂ


''ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಬಿಡುವ ವಿಚಾರ ಈ ಸುದ್ದಿ ಹೊಸದಲ್ಲ. ಎಲ್ಲರನ್ನೂ ವಿಶ್ವಾಸ ಪಡೆಯುವ ಕೆಲಸ ಮಾಡಲಾಗುವುದು. ಸರಕಾರ ಬೀಳಿಸಲು ಬಿಜೆಪಿಯ ಎಲ್ಲಾ ನಾಯಕರು ಕಾಯುತ್ತಿದ್ದಾರೆ. ನಮ್ಮ ಶಾಸಕರನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡುತ್ತೇವೆ,'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

''ನನ್ನ ಆಡಳಿತದ ಬಗ್ಗೆ ಶಾಸಕರು ಮುನಿಸಿಕೊಂಡಿದ್ದಾರೆ ಎಂದು ಯಡಿಯೂರಪ್ಪಗೆ ಯಾರು ಹೇಳಿದರೋ ಗೊತ್ತಿಲ್ಲ. ಬಿಜೆಪಿಯವರು ಮೇ 23ರ ನಂತರ ಸರಕಾರ ಬೀಳಲಿದೆ ಎಂದು ಗಡುವು ಕೊಟ್ಟಿದ್ದಾರೆ. ಯಾರು ಏನು ಹೇಳಿದ್ದಾರೆ ಅನ್ನೋದು ಮುಖ್ಯವಲ್ಲ. ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಸೇರಿ ಸರಕಾರ ಸುಭದ್ರವಾಗಿ ನಡೆಸಬೇಕಿದೆ. ನಾನು ನನ್ನ ಜವಾಬ್ದಾರಿ ನಿರ್ವಹಿಸುವೆ,'' ಎಂದರು.

''ನಾನು ಡ್ರಾಮಾ ಮಾಡುವವರನ್ನು ಹಿಡಿದುಕೊಳ್ಳಲು ಆಗಲ್ಲ. ರಾಜ್ಯದಲ್ಲಿ ಬರಗಾಲ ಇದೆ. ಆ ಬಗ್ಗೆ ಚರ್ಚಿಸಲು ಏ.26ರ ನಂತರ ಅಧಿಕಾರಿಗಳ ಸರಣಿ ಸಭೆ ನಡೆಸುವೆ. ನನ್ನ ಸರಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇದಕ್ಕಾಗಿ ಬಿಜೆಪಿಯವರು ನಡೆಸುವ ಹೈಡ್ರಾಮಾ ನೋಡಿ ಖುಷಿಪಡುವೆ,'' ಎಂದು ಟಾಂಗ್‌ ನೀಡಿದರು.

''ಮಂಡ್ಯ, ತುಮಕೂರು, ಹಾಸನದಲ್ಲಿ ಜೆಡಿಎಸ್‌ ಗೆಲ್ಲಲಿದೆ. ಫಲಿತಾಂಶ ನಂತರ ಕೆಲವು ಮಾಧ್ಯಮಗಳಿಗೆ ನಿರಾಶೆ ಕಾದಿದೆ,'' ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನ ಗೆಲ್ಲಲಿದೆ ಎಂಬ ಬಿ.ಎಸ್‌.ವೈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ''ಅವರ ರೀತಿ ಭವಿಷ್ಯ ಹೇಳಲು ನನಗೆ ಬರಲ್ಲ, ಫಲಿತಾಂಶ ನಂತರ ಎಲ್ಲವೂ ತಿಳಿಯಲಿದೆ,'' ಎಂದರು.

''ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ಸರಕಾರ ರಚನೆಯಾಗಲಿದೆ. ರಾಜ್ಯ ಬಿಜೆಪಿ ನಾಯಕರು ಮೋದಿ ಹೆಸರಲ್ಲಿ ಮತ ಕೇಳಿದರು. ಆದ್ರೆ ಮೋದಿ ಅವರಿಗೇ ವರ್ಚಸ್ಸು ಇಲ್ಲ ಎಂದ ಮೇಲೆ ಜನ ಬೆಂಬಲ ಎಲ್ಲಿಂದ ಸಿಗಲಿದೆ,'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ