ನೆರೆ ಸಂತ್ರಸ್ತರಿಗೆ ಶ್ರವಣಬೆಳಗೊಳ ಮಠದಿಂದ 35 ಲಕ್ಷ ನೆರವು: ನಿರ್ಧಾರ
ಉತ್ತರ ಕರ್ನಾಟಕ ಭಾಗದ ನೆರೆ ಪೀಡಿತ ಸಂತ್ರಸ್ತರಿಗೆ ನೆರವಾಗಲು ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠವು ಆಹಾರ ಸಾಮಗ್ರಿ, ಔಷಧವನ್ನು ಸರಬರಾಜು ಮಾಡಲು 25 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10 ಲಕ್ಷ ರೂ. ಸೇರಿ ಒಟ್ಟು ರೂ. 35 ಲಕ್ಷ ಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಶ್ರೀಮಠದ ಆಡಳಿತ ಮಂಡಳಿ ತಿಳಿಸಿದೆ.
Vijaya Karnataka 12 Aug 2019, 5:00 am
ಹಾಸನ: ಉತ್ತರ ಕರ್ನಾಟಕ ಭಾಗದ ನೆರೆ ಪೀಡಿತ ಸಂತ್ರಸ್ತರಿಗೆ ನೆರವಾಗಲು ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠವು ಆಹಾರ ಸಾಮಗ್ರಿ, ಔಷಧವನ್ನು ಸರಬರಾಜು ಮಾಡಲು 25 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10 ಲಕ್ಷ ರೂ. ಸೇರಿ ಒಟ್ಟು ರೂ. 35 ಲಕ್ಷ ಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಶ್ರೀಮಠದ ಆಡಳಿತ ಮಂಡಳಿ ತಿಳಿಸಿದೆ.
ರಾಜ್ಯದಲ್ಲಿ ಈ ಹಿಂದೆಯೂ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾದ ಸಂದರ್ಭದಲ್ಲಿಯೂ ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದಿಂದ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿತ್ತು.
ಪ್ರವಾಹದಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಸಾಂತ್ವನ ಹೇಳಿದ್ದು, ಹಾಸನ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ. ಶ್ರೀಗಳು ಚಾತುರ್ಮಾಸ ವ್ರತದಲ್ಲಿದ್ದರೂ ನೆರೆ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ. ಈಗಾಗಲೇ ಅವರ ಸೂಚನೆಯಂತೆ ಅನೇಕ ಸಂಘ ಸಂಸ್ಥೆಗಳು ಸಂತ್ರಸ್ತರಿಗೆ ನೆರವಾಗುವ ಕಾರ್ಯದಲ್ಲಿ ನಿರತವಾಗಿವೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ರಾಜ್ಯದಲ್ಲಿ ಈ ಹಿಂದೆಯೂ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾದ ಸಂದರ್ಭದಲ್ಲಿಯೂ ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದಿಂದ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿತ್ತು.
ಪ್ರವಾಹದಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಸಾಂತ್ವನ ಹೇಳಿದ್ದು, ಹಾಸನ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ. ಶ್ರೀಗಳು ಚಾತುರ್ಮಾಸ ವ್ರತದಲ್ಲಿದ್ದರೂ ನೆರೆ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ. ಈಗಾಗಲೇ ಅವರ ಸೂಚನೆಯಂತೆ ಅನೇಕ ಸಂಘ ಸಂಸ್ಥೆಗಳು ಸಂತ್ರಸ್ತರಿಗೆ ನೆರವಾಗುವ ಕಾರ್ಯದಲ್ಲಿ ನಿರತವಾಗಿವೆ ಎಂದು ಆಡಳಿತ ಮಂಡಳಿ ತಿಳಿಸಿದೆ.