ಆ್ಯಪ್ನಗರ

ಚಿರತೆ ದಾಳಿಗೆ 4 ಜಾನುವಾರು ಬಲಿ

ಹಾಸನ ಮತ್ತು ಸಕಲೇಶಪುರ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಚಿರತೆ ದಾಳಿಗೆ ನಾಲ್ಕು ಜಾನುವಾರುಗಳು ಮೃತಪಟ್ಟಿವೆ.

Vijaya Karnataka 16 Nov 2019, 5:00 am
ಹಾಸನ/ ವನಗೂರು: ಹಾಸನ ಮತ್ತು ಸಕಲೇಶಪುರ ತಾಲೂಕಿನಲ್ಲಿನಡೆದ ಪ್ರತ್ಯೇಕ ಘಟನೆಗಳಲ್ಲಿ ಚಿರತೆ ದಾಳಿಗೆ ನಾಲ್ಕು ಜಾನುವಾರುಗಳು ಮೃತಪಟ್ಟಿವೆ.
Vijaya Karnataka Web HSN15N15_16
ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿ ದೇವಿಹಳ್ಳಿ ಗ್ರಾಮದ ಸಮೀಪ ಜಮೀನಿನಲ್ಲಿ ಎರಡು ಹಸುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.


ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಆನೆಗುಂಡಿ ಗ್ರಾಮದ ತಮ್ಮಣಗೌಡ ಅವರು ಹಸು ಹಾಗೂ ಎಂ.ಎಸ್‌ ದೊಡ್ಡೇಗೌಡ ಅವರು ಮೇಯಲು ಬಿಟ್ಟಿದ್ದ ಎಮ್ಮೆ ಏಕಾಏಕಿ ನಾಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ ಸಮೀಪದ ಅರಣ್ಯದಲ್ಲಿಚಿರತೆ ತಿಂದು ಹಾಕಿದ ಹಸು ಮತ್ತು ಎಮ್ಮೆ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಹೆತ್ತೂರು ಪಶು ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೇಲೂರು ಸಮೀಪ ಸಾರ್ವಜನಿಕರಿಗೆ ತೂಂದರೆ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಹಿಡಿದು ಅದನ್ನು ಬಿಸಲೆ ಅರಣ್ಯಕ್ಕೆ ಬಿಟ್ಟಿರುವುದೇ ಹುಲಿ, ಚಿರತೆಗಳ ದಾಳಿಗೆ ಕಾರಣವಾಗಿದೆ. ಜಲ್ಲೆಯಲ್ಲಿಯಾವುದೇ ಭಾಗದಲ್ಲಿಸೆರೆಸಿಕ್ಕ ವನ್ಯಜೀವಿಗಳನ್ನು ಬಿಸಲೆ ಅರಣ್ಯದಲ್ಲಿಬೀಡುವ ಅರಣ್ಯ ಇಲಾಖೆಯ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಬಿಸ್ಲೆ, ಮಾಯಾನೂರು, ಮಂಕನಹಳ್ಳಿ, ಅತಿಹಳ್ಳಿ, ಹೂಂಗಡಹಳ್ಳ ಮುಂತಾದ ಗ್ರಾಮಗಳಲ್ಲಿ ಹುಲಿ, ಚಿರತೆಗಳು ನಿರಂತರವಾಗಿ ಜಾನುವಾರು ಮೇಲೆ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲಎಂದು ಜನತೆ ದೂರಿದ್ದಾರೆ.

ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿ ದೇವಿಹಳ್ಳಿ ಗ್ರಾಮದ ಸಮೀಪ ಜಮೀನಿನಲ್ಲಿ ಎರಡು ಹಸುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಕೂಲಿಕಾರ್ಮಿಕ ಮಂಜೇಗೌಡರಿಗೆ ಸೇರಿದ ಈ ಹಸುಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿಚಿರತೆ ದಾಳಿ ನಡೆಸಿದೆ.

ಕೂಲಿಯೊಂದಿಗೆ ಹೈನುಗಾರಿಕೆ ಮಾಡಿಕೊಂಡಿದ್ದ ಕುಟುಂಬ ಎರಡು ಹಸುಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಶಾಂತಿಗ್ರಾಮ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ಹಾಗೂ ತಹಸೀಲ್ದಾರ್‌ಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಜೆಡಿಎಸ್‌ ವಕ್ತಾರ ಹೊಂಗೆರೆ ರಘು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ