ಆ್ಯಪ್ನಗರ

ಐವರ ಮೇಲೆ ಹರಿದ ಜೀಪ್: ಮೂವರಿಗೆ ಗಂಭೀರ ಗಾಯ

ಮಂಗಳೂರು ಕಡೆಯಿಂದ ಹಾಸನದ ಕಡೆಗೆ ಹೊರಟಿದ್ದ ಬೊಲೆರೋ ಜೀಪ್‌ನಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯ ಬಂಟ್ವಾಳ ಮೂಲದ ನಿತಿನ್ ಹಾಗೂ ಮಹೇಶ್ ಎಂಬುವರಿದ್ದು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 29 Oct 2018, 3:22 pm
ಸಕಲೇಶಪುರ: ರಸ್ತೆ ಬದಿಯಲ್ಲಿ ನಿಂತಿದ್ದ ಐವರ ಮೇಲೆ ಜೀಪೊಂದು ಹರಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ
Vijaya Karnataka Web Jeep


ಗ್ರಾಮದ ಜೆ.ಪಿ ನಗರ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ಹೆದ್ದಾರಿ ಬದಿ ನಿಂತಿದ್ದ ಪುನೀತ್ (6), ಜಾಸ್ಮಿನ್ (9) ಶರತ್ (18) ಜಯಂತಿ (30) ಹಾಗೂ ಆಕೆಯ ಒಂದು ವರ್ಷದ ಮಗುವೊಂದರ ಮೇಲೆ ಜೀಪು ಹರಿದು ಹೋಗಿದೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆ ದಾಖಲು ಮಾಡಲಾಗಿದೆ.

ಜಯಂತಿ ಹಾಗೂ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೊರಟ ನಡೆಸುತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುವುದೆಂದು ತಿಳಿದು ಬಂದಿದೆ.

ಮಂಗಳೂರು ಕಡೆಯಿಂದ ಹಾಸನದ ಕಡೆಗೆ ಹೊರಟಿದ್ದ ಬೊಲೆರೋ ಜೀಪ್‌ನಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯ ಬಂಟ್ವಾಳ ಮೂಲದ ನಿತಿನ್ ಹಾಗೂ ಮಹೇಶ್ ಎಂಬುವರಿದ್ದು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಣ್ಣೆದುರೇ ಅಪಘಾತವಾಗಿದ್ದನ್ನು ಕಂಡ ಸಾರ್ವಜನಿಕರು ಜೀಪಿನಲ್ಲಿದ್ದ ಇಬ್ಬರನ್ನು ಥಳಿಸಿ ಜೀಪಿಗೆ ಬೆಂಕಿ ಹಾಕುವ ಯತ್ನದಲ್ಲಿದ್ದಾಗ ಪೊಲೀಸರು ಸ್ಥಳಕ್ಕೆ ಧಾವಿಸಿ ಆಕ್ರೋಶಿತರನ್ನು ಸಮಾಧಾನ ಪಡಿಸಿ ಆರೋಪಿಗಳನ್ನು ಬಂಧಿಸಿದ್ದಾರೆ

ಸ್ಥಳಕ್ಕೆ ಭೇಟಿ ನೀಡಿರುವ ಪಿಎಸ್ಐ ರಾಘವೇಂದ್ರ ದೂರು ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ