ಆ್ಯಪ್ನಗರ

ಹಾಸನದಲ್ಲೊಂದು ಅಮಾನವೀಯ ಘಟನೆ; ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ! ವ್ಯಾಪಕ ಆಕ್ರೋಶ

ಹಾಸನದ ಹೇಮಾವತಿ ಪ್ರತಿಮೆ ಬಳಿ ಈ ಘಟನೆ ನಡೆದಿದ್ದು, ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ಅಣಕಿಸುತ್ತಿದೆ. ವಿಷಯ ತಿಳಿದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಹಲ್ಲೆ ಮಾಡಿದ ವ್ಯಕ್ತಿಯನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದ್ದರೂ, ನಗರದ ಹೃದಯ ಭಾಗದಲ್ಲಿ ನಡೆದ ಈ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು ಎಂಬ ಅಸಮಾಧಾನ ಸಾರ್ವಜನಿಕರದ್ದಾಗಿದೆ.

Vijaya Karnataka 13 Jan 2022, 11:42 am
ಹಾಸನ: ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಎಂಬ ಆರೋಪ ಹೊರಿಸಿ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Vijaya Karnataka Web gang attack police


ನಗರದ ಹೇಮಾವತಿ ಪ್ರತಿಮೆ ಬಳಿ ಮಂಗಳವಾರ ಈ ಘಟನೆ ನಡೆದಿದ್ದು, ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ಅಣಕಿಸುತ್ತಿದೆ. ವಿಷಯ ತಿಳಿದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಹಲ್ಲೆ ಮಾಡಿದ ವ್ಯಕ್ತಿಯನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದ್ದರೂ, ನಗರದ ಹೃದಯ ಭಾಗದಲ್ಲಿ ನಡೆದ ಈ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು ಎಂಬ ಅಸಮಾಧಾನ ಸಾರ್ವಜನಿಕರದ್ದಾಗಿದೆ.

ಶೀಘ್ರವೇ ತಪ್ಪಿತಸ್ಥರ ಸೆರೆ: ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ನಮಗೆ ಸಿಕ್ಕಿರುವ ವಿಡಿಯೋದಲ್ಲಿ ಇರುವ ಎಲ್ಲರನ್ನೂ ಪತ್ತೆ ಹಚ್ಚುತ್ತಿದ್ದೇವೆ. ಪ್ರವೀಣ್‌ ಗೌಡ ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್‌ಪಿ ಶ್ರೀನಿವಾಸಗೌಡ ತಿಳಿಸಿದರು. ಹಲ್ಲೆಗೊಳಗಾದ ಯುವಕ ದೂರು ನೀಡಿದ್ದು, ಕಲಂ 341, 504, 506, 294 ಸೆಕ್ಷನ್‌ ಅಡಿಯಲ್ಲಿ ಕೇಸ್‌ ದಾಖಲಿಸಿದ್ದೇವೆ. ಪ್ರಕರಣ ಸಂಬಂಧ ಯುವತಿ ಸಹ ದೂರು ನೀಡಿಲ್ಲ. ಆಕೆ ದೂರು ನೀಡಿದರೆ ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇತ್ತೀಚೆಗೆ ಹಿರೀಸಾವೆಯಲ್ಲಿ ಪೊಲೀಸ್‌ ಠಾಣೆಗೆ ನುಗ್ಗಿ ಗಲಭೆ ಮಾಡಿದ ಐದು ಮಂದಿಯನ್ನು ಬಂಧಿಸಲಾಗಿದೆ. ಪ್ರತಿನಿತ್ಯ ನಾನಾ ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗುತ್ತಿದೆ. ಪೊಲೀಸ್‌ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ತಪ್ಪಿತಸ್ಥರು ಯಾರೇ ಇರಲಿ ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ