ಆ್ಯಪ್ನಗರ

ಎಸಿಬಿ ಬಲೆಗೆ ಬಿದ್ದ ಗುಮಾಸ್ತ

ಅಂಗನವಾಡಿ ಸಹಾಯಕಿ ಹುದ್ದೆ ನೀಡಲು 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚನ್ನರಾಯಪಟ್ಟಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಗುಮಾಸ್ತ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

Vijaya Karnataka 26 Sep 2018, 5:00 am
ಹಾಸನ: ಅಂಗನವಾಡಿ ಸಹಾಯಕಿ ಹುದ್ದೆ ನೀಡಲು 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚನ್ನರಾಯಪಟ್ಟಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಗುಮಾಸ್ತ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.
Vijaya Karnataka Web acb trap clerk
ಎಸಿಬಿ ಬಲೆಗೆ ಬಿದ್ದ ಗುಮಾಸ್ತ


ಶ್ರೀಧರ್‌ ಬಲೆಗೆ ಬಿದ್ದ ಸಿಬ್ಬಂದಿ. ಈತ ಚನ್ನರಾಯಪಟ್ಟಣ ತಾಲೂಕು ರಾಚೇನಹಳ್ಳಿ ಗ್ರಾಮದ ಮಹಿಳೆ ಸಾವಿತ್ರಮ್ಮ ಎಂಬುವವರಿಗೆ ಸಹಾಯಕಿ ಹುದ್ದೆ ನೀಡಲು 40 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆಕೆ ಎಸಿಬಿಗೆ ದೂರು ಸಲ್ಲಿಸಿದ್ದರು. ಮಂಗಳವಾರ ಸಂಜೆ ಹಾಸನದ ಬಸ್‌ ನಿಲ್ದಾಣದಲ್ಲಿ ಹತ್ತು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಹಣದ ಸಹಿತ ಬಂಧಿಸಿದರು. ಈ ಸಂಬಂಧ ಎಸಿಬಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ