ಆ್ಯಪ್ನಗರ

ಆಧಾರ್ ಜೋಡಣೆಗೆ ವಾರದ ಗಡುವು

ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗಳ ಅನುಷ್ಠಾನಕ್ಕೆ ಅತ್ಯಂತ ತುರ್ತಾಗಿ ಆಧಾರ್ ಜೋಡಣೆಯನ್ನು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.

Vijaya Karnataka 17 Jun 2019, 9:27 pm
ಹಾಸನ: ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗಳ ಅನುಷ್ಠಾನಕ್ಕೆ ಅತ್ಯಂತ ತುರ್ತಾಗಿ ಆಧಾರ್ ಜೋಡಣೆಯನ್ನು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.
Vijaya Karnataka Web HSN-HSN17M8


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘‘2018-19 ನೇ ಸಾಲಿನ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲು ಆಧಾರ್ ಜೋಡಣೆ ಕಡ್ಡಾಯವಾಗಿದೆ. ಇದನ್ನು ಇನ್ನೊಂದು ವಾರದೊಳಗೆ ಪೂರ್ಣ ಗೊಳಿಸುವಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ,’’ ಸೂಚನೆ ನೀಡಿದರು.

‘‘ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಮೊದಲ ಕಂತಿನ ಹಣ ವರ್ಗಾವಣೆ ಯನ್ನು ಹಾಗೂ ಬೆಳೆ ಪರಿಹಾರಕ್ಕೂ ರೈತರ ಖಾತೆಗಳಿಗೆ ಆಧಾರ್ ಜೋಡಣೆ ಯಾಗಬೇಕಿದ್ದು, ತಕ್ಷಣವೇ ಕಾರ್ಯ ಪ್ರವತ್ತರಾಗಿ ಕಾರ್ಯ ಮುಕ್ತಾಯ ಗೊಳಿ ಸುವಂತೆ ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಅಧಿಕಾರಿಗಳು ಮತ್ತು ಲೀಡ್ ಬ್ಯಾಂಕ್ ಮುಖ್ಯಸ್ಥರಿಗೆ,’’ ತಿಳಿಸಿದರು.

‘‘ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಬೇಕು. ಮಾಧ್ಯಮಗಳ ಮೂಲಕ ಹಾಗೂ ಕ್ಷೇತ್ರ ಮಟ್ಟದಲ್ಲಿ ಜಾಗತಿ ಕಾರ್ಯಗಳನ್ನು ನಡೆಸುವಂತೆ,’’ ಸಲಹೆ ನೀಡಿದರು.

‘‘ಕೆರೆಗಳ ಅಭಿವದ್ದಿ ಜಿಲ್ಲೆಯಲ್ಲಿ ಆಶಾದಾಯಕವಾಗಿ ನಡೆಯುತ್ತಿದೆ ಅದಕ್ಕೆ ಪೂರಕವಾಗಿ ಹುಣಸಿನಕೆರೆ, ಸಾಲಗಾಮೆ, ಹಳೇಬೀಡು ಕೆರೆಗಳು ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿನ ಪ್ರಮುಖ ಕೆರೆಗಳು ಅಭಿವದ್ಧಿಯಾಗ ಬೇಕು ಅದಕ್ಕಾಗಿ ನಿರಂತರವಾಗಿ ತಾವು ಹಾಗೂ ಜಿ ಪಂ ಸಿಇಒ ಮೇಲ್ವಿಚಾರಣೆ ಮಾಡುವುದಾಗಿ,’’ತಿಳಿಸಿದರು.

ಜಿಪಂ ಸಿಇಒ ಡಾ. ಕೆ.ಎನ್ ವಿಜಯ ಪ್ರಕಾಶ್ ಮಾತನಾಡಿ, ‘‘ಜಿಲ್ಲೆಯಲ್ಲಿ ಜಲಾಮತ ಯೋಜನೆಯನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸ ಬೇಕು ಇದಕ್ಕಾಗಿ ಪ್ರತಿ ತಾಲೂಕಿಗೆ 2-3 ಬಹತ್ ಕೆರೆಗಳನ್ನು ಗುರುತಿಸಲು ಸಣ್ಣ ನೀರಾವರಿ ಇಲಾಖೆ ಮೂಲಕ ಅಭಿವದ್ಧಿ ಪಡಿಸಲು ಗುರಿ ನಿಗದಿಪಡಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವತ್ತರಾ ಗಬೇಕು,’’ ಎಂದರು.

‘‘ಜಿಲ್ಲೆಯಲ್ಲಿ ಪ್ರತಿ ಗ್ರಾಪಂ ಹಂತದಲ್ಲಿ ಜಲಾಮತ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ ಮಾಡುವ ಯೋಜನೆ ಯನ್ನು ರೂಪಿಸಲಾಗಿದೆ. ಸಾರ್ವಜನಿಕರ ಸಹಯೋಗದೊಂದಿಗೆ ಜಿಲ್ಲೆಯನ್ನು ಮಾದರಿಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು,’’ ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಪಂ ಯೋಜನಾ ನಿರ್ದೇಶಕ ಟಿ.ವಿ. ಅರುಣ್ ಕುಮಾರ್, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಮಧುಸೂದನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸವಿತಾ ಅಧಿಕಾರಿಗಳು ಹಾಜರಿದ್ದರು.

ತ್ಯಾಜ್ಯ ವಿಲೇವಾರಿ: ಕಾಳಜಿ ವಹಿಸಿ
ಜಿಲ್ಲೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯಗಳ ವಿಲೇವಾರಿ, ಸ್ವಚ್ಛತೆ ಬಗ್ಗೆ ಗರಿಷ್ಠ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಪ್ರತಿನಿತ್ಯ ವ್ಯವಸ್ಥಿತವಾಗಿ ಸಂಗ್ರಹಿಸಿ ಸಾಗಾಟ ಮಾಡಿ ವೈಜ್ಞಾನಿಕವಾಗಿ ಅವುಗಳನ್ನು ಪರಿವರ್ತನೆ ಗೊಳಿಸಬೇಕು. ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಹಾಗೂ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು, ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸುವುದರ ಜತೆಗೆ ನಿರ್ಬಂಧವನ್ನು ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ