ಆ್ಯಪ್ನಗರ

ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಎರಡನೇ ಭಾರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

Vijaya Karnataka 1 Jun 2019, 5:00 am
ಹಾಸನ : ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಎರಡನೇ ಭಾರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
Vijaya Karnataka Web HSN-HSN31N11


ಕಳೆದ ಲೋಕಸಭಾ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಅವರು ನಿರ್ಗಮಿತ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರಿಂದ ಅಧಿಕಾರ ವಹಿಸಿಕೊಂಡರು.

ಇದೇ ವೇಳೆ ಕಳೆದ 2 ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿ, ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿ ಮಾಡಿದ ಸೇವೆ ತೃಪ್ತಿ ತಂದಿದೆ ಹಾಗೂ ಹೆಚ್ಚಿನ ಅನುಭವವನ್ನು ನೀಡಿದೆ. ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮುಕ್ತಾಯಗೊಂಡಿದ್ದು ಇದಕ್ಕೆ ಸಹಕರಿಸಿದ ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಹಾಸನದಲ್ಲಿ ಸಮರ್ಥ ಅಧಿಕಾರಿಗಳ ದೊಡ್ಡ ಪಡೆ ಇದೆ. ಹೇಳಿದ ತಕ್ಷ ಣ ಅರ್ಥ ಮಾಡಿಕೊಂಡು ಕೆಲಸ ಮಾಡುವವರು ಹೆಚ್ಚಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ನಿರೀಕ್ಷಿಸಬಹುದಾಗಿದೆ ಎಂದರು.

ಮತ್ತೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಕ್ರಂ ಪಾಷ ಮಾತನಾಡಿ, ಯಶಸ್ವಿ ಚುನಾವಣೆ ನಡೆಸುವಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಹ ಸಿಬ್ಬಂದಿಗಳ ಜವಾಬ್ದಾರಿ ಹೆಚ್ಚು. ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ ಸಂಘಟಿಸುವಲ್ಲಿ ಎಲ್ಲರೂ ಉತ್ತಮ ಸೇವೆ ಸಲ್ಲಿಸಿದ್ದು ಎಲ್ಲರೂ ಅಭಿನಂದನಾರ್ಹರು ಎಂದರು.

ಜಿಪಂ ಸಿಇಒ ಡಾ. ಕೆ.ಎನ್‌. ವಿಜಯ ಪ್ರಕಾಶ್‌ ಮಾತನಾಡಿ, ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಅಕ್ರಂ ಪಾಷ ಅವರಿಬ್ಬರು ಅತ್ಯಂತ ಕ್ರಿಯಾ ಶೀಲ ಹಾಗೂ ಸಮರ್ಥ ಆಡಳಿತದಾರರು, ಹೃದಯವಂತ ಅಧಿಕಾರಿಗಳಾಗಿದ್ದಾರೆ ಎಂದರು.

ಅಕ್ರಂ ಪಾಷ ಅವರು ಚುನಾವಣೆ ಸಂದರ್ಭ ವರ್ಗಾವಣೆ ಹೊಂದಿ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರ ಸ್ವೀಕರಿಸಿದ ಮೇಲೂ ಹಾಸನ ಜಿಲ್ಲೆಯ ಉದ್ಯೋಗ ಖಾತ್ರೆ ಯೋಜನೆಯಡಿ 51 ಕೋಟಿ ರೂ. ಗಳ ಬಾಕಿ ಅನುದಾನ ಬಿಡುಗಡೆ ಮಾಡಿಕೊಟ್ಟು ಸಹಕರಿಸಿದ್ದನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅತ್ಯಂತ ಕ್ರಿಯಾ ಶೀಲರಾಗಿದ್ದು ಅವರಿಗೆ ಮುಂದೆ ಉತ್ತಮ ಹುದ್ದೆಗಳು ಸಿಗಲೆಂದು ಡಾ. ಕೆ.ಎನ್‌. ವಿಜಯಪ್ರಕಾಶ್‌ ಈ ಸಂದರ್ಭದಲ್ಲಿ ಹಾರೈಸಿದರು.

ಅಪರ ಜಿಲ್ಲಾಧಿಕಾರಿ ಎಂ.ಎಲ್‌ ವೈಶಾಲಿ, ಉಪವಿಭಾಗಾಧಿಕಾರಿ ಡಾ. ಎಚ್‌.ಎನ್‌. ನಾಗರಾಜ್‌ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತ ಮಾತನಾಡಿ, ಇಬ್ಬರೂ ಅಧಿಕಾರಿಗಳ ಸೇವಾದಕ್ಷ ತೆ, ಚುನಾವಣೆ ಸಂದರ್ಭದಲ್ಲಿ ವಹಿಸಿದ ಮುಂದಾಳತ್ವ, ಸರಳತೆಗಳ ಬಗ್ಗೆ ವಿವರಿಸಿದರು. ಮುಜರಾಯಿ ತಹಸೀಲ್ದಾರ್‌ ಶಾರದಾಂಬ ಸ್ವಾಗತಿಸಿದರು.

ಸಕಲೇಶಪುರ ಉಪವಿಭಾಗಾಧಿಕಾರಿ ಕವಿತಾ ರಾಜಾರಾಮ್‌, ನಗರಸಭೆ ಆಯುಕ್ತ ರೂಪಶೆಟ್ಟಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ