ಆ್ಯಪ್ನಗರ

ಆಲೂರು:ಸ್ಟೇರಿಂಗ್‌ ಜಾಮ್‌: ಚರಂಡಿಗೆ ನುಗ್ಗಿದ ಸಾರಿಗೆ ಬಸ್‌

ಸಾರಿಗೆ ಬಸ್‌ ಸ್ಟೇರಿಂಗ್‌ ಜಾಮ್‌ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿದ ಘಟನೆ ಶನಿವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Vijaya Karnataka 3 Jun 2018, 5:00 am
ಆಲೂರು: ಸಾರಿಗೆ ಬಸ್‌ ಸ್ಟೇರಿಂಗ್‌ ಜಾಮ್‌ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿದ ಘಟನೆ ಶನಿವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Vijaya Karnataka Web aluru ksrtc bus staring jam rush to drynage
ಆಲೂರು:ಸ್ಟೇರಿಂಗ್‌ ಜಾಮ್‌: ಚರಂಡಿಗೆ ನುಗ್ಗಿದ ಸಾರಿಗೆ ಬಸ್‌


ಪಟ್ಟಣ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರ ಭರತವಳ್ಳಿ ಗ್ರಾಮದ ಬಳಿ ದೊಡ್ಡ ತಿರುವು ಇದ್ದು ಹಾಸನದಿಂದ ಆಲೂರು ಪಟ್ಟಣಕ್ಕೆ ಆಗನಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 18ಮಂದಿ ಪ್ರಯಾಣಿಕರು ಇದ್ದರು. ಸ್ಟೇರಿಂಗ್‌ ಜಾಮ್‌ ಆದ ಕಾರಣ ಮುಖ್ಯರಸ್ತೆಯಿಂದ ಎಡಬದಿಗೆ ತಿರುಗಿ ಹೊಸದಾಗಿ ನಿರ್ಮಿಸುತ್ತಿರುವ ರಸ್ತೆಯ ಚರಂಡಿಗೆ ಬಸ್‌ ನುಗ್ಗಿತು. ಅದೃಷ್ಟವಶಾತ್‌ ಯಾವುದೇ ಅನಾಹುತವಾಗಿಲ್ಲ.

ರಾಷ್ಟ್ರೀಯ ಹೆದ್ದಾರಿ ದ್ವಿಪಥ ಕಾಮಗಾರಿ ಪ್ರಾರಂಭವಾಗಿ ವರ್ಷ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಹಾಗಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ