ಆ್ಯಪ್ನಗರ

ಎಚ್‌ಡಿಕೆಗೆ ಪೂರ್ಣ ಅಧಿಕಾರಾವಧಿ ನೀಡಲಿ ಎಂದು ಪ್ರಾರ್ಥಿಸಿದೆ: ಅನಿತಾ ಕುಮಾರಸ್ವಾಮಿ

'ಪ್ರತಿ ವರ್ಷ ದೇವಿ ದರ್ಶನಕ್ಕೆ ಬರುತ್ತೇನೆ. ಇಡೀ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿರುವುದಾಗಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.

Vijaya Karnataka Web 5 Nov 2018, 7:07 pm
ಹಾಸನ: ರೈತರ ಸಂಕಷ್ಟವನ್ನು ಪರಿಹರಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಶಕ್ತಿ ಹಾಗೂ ಪೂರ್ಣ ಅಧಿಕಾರಾವಧಿ ನೀಡಲಿ ಎಂದು ಹಾಸನಾಂಬೆ ದೇವಿಯಲ್ಲಿ ಪ್ರಾರ್ಥಿಸಿದೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ
Vijaya Karnataka Web anita


ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರತಿ ವರ್ಷ ದೇವಿ ದರ್ಶನಕ್ಕೆ ಬರುತ್ತೇನೆ. ಇಡೀ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಗೆಲುವು ದಾಖಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅನಿತಾ ಕುಮಾರಸ್ವಾಮಿ, ರಾಮನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕೈಗೊಳ್ಳುವೆ ಎಂದು ತಿಳಿಸಿದ್ದಾರೆ.

ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ನಡೆದಿದ್ದ ಆದರೆ, ಆತ ಮಾಡುವ ಒಳ್ಳೆಯ ಕೆಲಸಕ್ಕೆ ಸದಾ ಬೆಂಬಲ ನೀಡುತ್ತೇನೆ. ದೇವರು ಹಾಗೂ ಜನರ ಆಶೀರ್ವಾದ ಇರುವವರೆಗೂ ಅಧಿಕಾರದಲ್ಲಿ ಇರುತ್ತೇವೆ. ಅವಕಾಶ ಸಿಕ್ಕರೆ ಸಚಿವೆಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ