ಆ್ಯಪ್ನಗರ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಾಸನ ಮಿಂಚಲು 'ರೋಹಿಣಿ' ನಕ್ಷತ್ರ ಅಲ್ಲ, ಭವಾನಿ ಕಾರಣ: ರೇವಣ್ಣ

ಎಸ್‌ಎಸ್‌ಎಲ್‌ಸಿ ಫರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣರಲ್ಲ. ಅವರ ಕೊಡುಗೆ ಏನೂ ಇಲ್ಲ ಎಂದು ಸಚಿವ ರೇವಣ್ಣ ಸ್ಪಷ್ಟಪಡಿಸಿದರು.

Vijaya Karnataka Web 1 May 2019, 5:15 pm
ಹಾಸನ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಹಾಸನ ನಂಬರ್‌ ಒನ್‌ ಜಿಲ್ಲೆಯಾಗಿ ಹೊರಹೊಮ್ಮಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣವಲ್ಲ. ನನ್ನ ಪತ್ನಿ ಭವಾನಿ ಕಾರಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್‌.ಡಿ. ರೇವಣ್ಣ ಹೇಳಿಕೊಂಡಿದ್ದಾರೆ.
Vijaya Karnataka Web ಎಚ್‌ಡಿ ರೇವಣ್ಣ
ಎಚ್‌ಡಿ ರೇವಣ್ಣ


ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ನನ್ನ ಪತ್ನಿ ಭವಾನಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಹಲವಾರು ಉಪಯುಕ್ತ, ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದಾರೆ. ಇದಕ್ಕಾಗಿ ಉತ್ತಮ ಫಲಿತಾಂಶ ಬಂದಿದೆ ಎಂದರು.

ಎಸ್‌ಎಸ್‌ಎಲ್‌ಸಿ ಫರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣರಲ್ಲ. ಅವರ ಕೊಡುಗೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಕೆಲವು ಶಾಲೆಗಳಲ್ಲಿ ಭಾನುವಾರವೂ ಶಿಕ್ಷಕರು ಪಾಠ ಹೇಳಿಕೊಡುತ್ತಿದ್ದರು. ಇದಕ್ಕೆಲ್ಲ ಭವಾನಿ ಕಾರಣ ಎಂದು ಎಚ್‌ಡಿ ರೇವಣ್ಣ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ