ಆ್ಯಪ್ನಗರ

ದೇವೇಗೌಡರ ಮಕ್ಕಳು ಏನೆಂಬುದನ್ನು ತೋರಿಸುತ್ತೇವೆ: ಎಚ್ ಡಿ ರೇವಣ್ಣ ಸವಾಲ್

ದೇವೇಗೌಡರ ಮಕ್ಕಳು ಏನೆಂಬುದನ್ನು ತೋರಿಸುತ್ತೇವೆ ಎಂದು ಎಚ್ ಡಿ ರೇವಣ್ಣ ಸವಾಲ್ ಎಸಿದ್ದಿದ್ದಾರೆ.

Vijaya Karnataka Web 19 Aug 2019, 4:25 pm
ಹಾಸನ: ಇಲ್ಲಿಯವರೆಗೂ ಹಾಸನದಲ್ಲಿ ಮಾತ್ರ ರಾಜಕೀಯ ಮಾಡುತ್ತಿದ್ದ ನಾನು, ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜತೆ ರಾಜ್ಯದಲ್ಲಿ ರಾಜಕೀಯ ಮಾಡುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮಕ್ಕಳು ಏನೆಂಬುದನ್ನು ತೋರಿಸುತ್ತೇವೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಸವಾಲ್ ಎಸಿದ್ದಿದ್ದಾರೆ.
Vijaya Karnataka Web revanna


ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್‌ನ್ನು ಹಾಸನ, ರಾಮನಗರ ಮತ್ತು ಮಂಡ್ಯ ಬಜೆಟ್ ಎಂದು ಟೀಕಿಸಿದ್ದರು. ಆದರೀಗ ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದ್ದಾರೆ. ಒಟ್ಟು ಶಿವಮೊಗ್ಗ ಜಿಲ್ಲೆಗೆ 2 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದಂತಾಗಿದೆ. ಇದೇನು ಶಿಕಾರಿಪುರ ಬಜೆಟ್ ಎಂದು ತಿರುಗೇಟು ನೀಡಿದರು.

ದೇವರ ಅನುಗ್ರಹದಿಂದ ಕುಮಾರಸ್ವಾಮಿ ಅವರು 14 ತಿಂಗಳು ಮುಖ್ಯಮಂತ್ರಿಯಾಗಿದ್ದರು. ನಾವೇನು ಸುಮ್ಮನೆ ಕುರುತ್ತೇವಾ?, ನಮಗೂ ಗೊತ್ತಿದೆ ಏನು ಮಾಡಬೇಕೆಂದು. ಇಲ್ಲಿಯವರೆಗೂ ಹಾಸನದಲ್ಲಿ ಮಾತ್ರ ರಾಜಕೀಯ ಮಾಡುತ್ತಿದ್ದೆ. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜತೆ ರಾಜ್ಯದಲ್ಲಿ ರಾಜಕೀಯ ಮಾಡುತ್ತೇನೆ. ಈ ಮೂಲಕ ದೇವೇಗೌಡರ ಮಕ್ಕಳು ಏನೆಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು.

ಫೋನ್ ಟ್ಯಾಪಿಂಗ್ ಪ್ರಕರಣ ಸಿಬಿಐಗೆ ಹಸ್ತಾಂತರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ತನಿಖೆಗೂ ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕೆಲವು ಕಾಂಗ್ರೆಸ್ ನಾಯಕರು ಸಿಬಿಐ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಯಾವುದೇ ತನಿಖೆ ಮಾಡಲಿ, ಎದುರಿಸಲು ನಾವು ಸಿದ್ಧ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರಕಾರ ನಮ್ಮವರ ಫೋನ್ ಕದ್ದಾಯಿಕೆ ಮಾಡಿತ್ತು. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಬೆಂಬಲಿಗರ ಮೇಲೆ ಐಟಿ ದಾಳಿ ನಡೆಸಿದ್ದರು ಎಂದು ರೇವಣ್ಣ ಆರೋಪಿಸಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಚ್ ವಿಶ್ವನಾಥ್ ಅವರ ಋಣ ತೀರಿಸಬೇಕಿದೆ. ಹೀಗಾಗಿ ಅವರ ಒತ್ತಾಯಕ್ಕೆ ಮಣಿದು ಸಿಬಿಐ ತನಿಖೆಗೆ ನೀಡಿದ್ದಾರೆ. ಅಷ್ಟೆ ಅಲ್ಲದೆ, ವಿಶ್ವನಾಥ್ ಅವರ ಅಳಿಯನ್ನ ಲೋಕೋಪಯೋಗಿ ಇಲಾಖೆ ಚೀಫ್ ಎಂಜಿನಿಯರ್ ಮಾಡಿ ಯಡಿಯೂರಪ್ಪ ನವರ ಋಣ ತೀರಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇದೆ ಎಂಬುವುದಕ್ಕೆ ಫೋನ್ ಟ್ಯಾಪಿಂಗ್ ಪ್ರಕರಣ ಸಿಬಿಐಗೆ ನೀಡಿದ್ದೆ ಸಾಕ್ಷಿ. ಎರಡು ಪಕ್ಷಗಳು ಸೇರಿ ದೇವೇಗೌಡರ ಕುಟುಂಬವನ್ನು ಟಾರ್ಗೆಟ್ ಮಾಡಿವೆ ಎಂದು ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ