ಆ್ಯಪ್ನಗರ

ಪುನಾರಚನೆಯೋ? ವಿಸ್ತರಣೆಯೋ? ಕಾದು ನೋಡಿ: ಕುತೂಹಲ ಕೆರಳಿಸಿದ ನಳೀನ್‌ ಕುಮಾರ್‌ ಕಟೀಲ್‌ ಹೇಳಿಕೆ

​​ಹಾಸನದಲ್ಲಿ ಜನ ಸೇವಕ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಳೀನ್‌ ಕುಮಾರ್ ಕಟೀಲ್‌, ಸಂಜೆ ಸಚಿವರುಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ. ಹೊಸಬರು ಇರುತ್ತಾರೋ? ಏನು ಅನ್ನೋದು ನಾಳೆ ಗೊತ್ತಾಗಲಿದೆ. ಬಿಜೆಪಿಗೆ ಬಂದವರಿರಲಿ, ಇಲ್ಲೇ ಇದ್ದವರಿರಲಿ ನಮ್ಮ ಪಕ್ಷದಲ್ಲಿ ‌ಎಲ್ಲರೂ ಒಂದೆ ಎಂದು ಹೇಳಿದರು. ಸಚಿವ ಸಂಪುಟ ವಿಸ್ತರಣೆ ಮಾಡಿದಾಗಲೆಲ್ಲಾ ಏನೇನೋ ಚರ್ಚೆ ಆಗುತ್ತದೆ.

Vijaya Karnataka Web 12 Jan 2021, 12:58 pm
ಹಾಸನ: ನಾಳೆ(ಬುಧವಾರ) ನಮ್ಮ ಸರಕಾರದ ಸಚಿವ ಸಂಪುಟ ರಚನೆ ಆಗುತ್ತದೆ. ಪುನಾರಚನೆಯೋ? ವಿಸ್ತರಣೆಯೋ? ಎಂಬುವುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ತಿಳಿಸಿದರು. ಈ ಮೂಲಕ ಸಿಎಂ ಬಿಎಸ್‌ವೈ ನೇತೃತ್ವದ ಸಚಿವ ಸಂಪುಟ ರಚನೆ ಕುರಿತಾಗಿ ಕುತೂಹಲ ಇನ್ನಷ್ಟು ಕೆರಳಿದೆ.
Vijaya Karnataka Web nalin kumar kateel
ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಜ್ಯಾಧ್ಯಕ್ಷ (ಸಂಗ್ರಹ ಚಿತ್ರ)


ಹಾಸನದಲ್ಲಿ ಜನ ಸೇವಕ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಳೀನ್‌ ಕುಮಾರ್ ಕಟೀಲ್‌, ಸಂಜೆ ಸಚಿವರುಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ. ಹೊಸಬರು ಇರುತ್ತಾರೋ? ಏನು ಅನ್ನೋದು ನಾಳೆ ಗೊತ್ತಾಗಲಿದೆ. ಬಿಜೆಪಿಗೆ ಬಂದವರಿರಲಿ, ಇಲ್ಲೇ ಇದ್ದವರಿರಲಿ ನಮ್ಮ ಪಕ್ಷದಲ್ಲಿ ‌ಎಲ್ಲರೂ ಒಂದೆ ಎಂದು ಹೇಳಿದರು. ಸಚಿವ ಸಂಪುಟ ವಿಸ್ತರಣೆ ಮಾಡಿದಾಗಲೆಲ್ಲಾ ಏನೇನೋ ಚರ್ಚೆ ಆಗುತ್ತದೆ.

ಆದ್ರೆ ನಮ್ಮಲ್ಲಿ ಅಸಮಾಧಾನ ಭುಗಿಲೆದ್ದಿಲ್ಲ, ಬೆಂಕಿಯೂ ಬಿದ್ದಿಲ್ಲ. ನಾಯಕತ್ವ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಕಟೀಲ್ ತಿಳಿಸಿದರು. ಬಿಜೆಪಿಯಲ್ಲಿ ನಾಯಕತ್ವ ಬದಲಾಗುತ್ತೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ನಳೀನ್ ಕುಮಾರ್ ಕಟೀಲ್‌ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ನಮ್ಮ ಪಕ್ಷದವರಾ? ನಮ್ಮ ಪಕ್ಷದ ನಾಯಕತ್ವ ನಿಶ್ಚಯ ಮಾಡೋದು ಸಿದ್ದರಾಮಯ್ಯನಾ?. ಮೊದಲು ಸಿದ್ದರಾಮಯ್ಯ ತಮ್ಮ ಸ್ಥಾನ ಮಾನ ಉಳಿಸಿಕೊಳ್ಳಲು ಯೋಚನೆ ಮಾಡಲಿ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಿನಲ್ಲಿ ಬಿಜೆಪಿಯಿಂದ ಹಸ್ತಕ್ಷೇಪ: ಪ್ರಜ್ವಲ್‌ ರೇವಣ್ಣ ಅಸಮಾಧಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ